Featured

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ – vishwanews24

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ, ಮಲಯಾಳಂ ಮೂಲದ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು.

ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್ ಇವತ್ತಿಗೂ ನೆನಪಿನಲ್ಲಿ ಉಳಿಯುವಂಥದ್ದು.

ಕೇರಳದಲ್ಲಿ 1966ರಲ್ಲಿ ಜಾಲಿ ಬಾಸ್ಟಿನ್ ಹುಟ್ಟಿದ್ದರೂ, ಬೆಳೆದದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ನೆಲೆಯೂರಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ಭೀಮ ಸಿನಿಮಾಗಾಗಿ ಕೆಲಸ ಮಾಡಿದ್ದರು.

ಡಿಸೆಂಬರ್ ಬಂತೆಂದರೆ ಒಂದು ರೀತಿಯಲ್ಲಿ ಚಿತ್ರೋದ್ಯಮಕ್ಕೆ ಭಯ ಕಾಡುತ್ತದೆ. ಹಲವು ವರ್ಷಗಳಿಂದ ಡಿಸೆಂಬರ್ ನಲ್ಲಿ ಚಿತ್ರೋದ್ಯಮ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಲೀಲಾವತಿ ಅವರನ್ನು ಕಳೆದುಕೊಂಡು ಚಿತ್ರೋದ್ಯಮ ದುಃಖದಲ್ಲಿತ್ತು. ಈಗ ಜಾಲಿ ಕೂಡ ಚಿತ್ರೋದ್ಯಮದಿಂದ ಮರೆಯಾಗಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago