Featured

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ – vishwanews24

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ, ಮಲಯಾಳಂ ಮೂಲದ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು.

ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್ ಇವತ್ತಿಗೂ ನೆನಪಿನಲ್ಲಿ ಉಳಿಯುವಂಥದ್ದು.

ಕೇರಳದಲ್ಲಿ 1966ರಲ್ಲಿ ಜಾಲಿ ಬಾಸ್ಟಿನ್ ಹುಟ್ಟಿದ್ದರೂ, ಬೆಳೆದದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ನೆಲೆಯೂರಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ಭೀಮ ಸಿನಿಮಾಗಾಗಿ ಕೆಲಸ ಮಾಡಿದ್ದರು.

ಡಿಸೆಂಬರ್ ಬಂತೆಂದರೆ ಒಂದು ರೀತಿಯಲ್ಲಿ ಚಿತ್ರೋದ್ಯಮಕ್ಕೆ ಭಯ ಕಾಡುತ್ತದೆ. ಹಲವು ವರ್ಷಗಳಿಂದ ಡಿಸೆಂಬರ್ ನಲ್ಲಿ ಚಿತ್ರೋದ್ಯಮ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಲೀಲಾವತಿ ಅವರನ್ನು ಕಳೆದುಕೊಂಡು ಚಿತ್ರೋದ್ಯಮ ದುಃಖದಲ್ಲಿತ್ತು. ಈಗ ಜಾಲಿ ಕೂಡ ಚಿತ್ರೋದ್ಯಮದಿಂದ ಮರೆಯಾಗಿದ್ದಾರೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

2 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

2 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago