Featured

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ – vishwanews24

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ಸಾಹಸ ನಿರ್ದೇಶಕ, ಮಲಯಾಳಂ ಮೂಲದ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು.

ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್ ಇವತ್ತಿಗೂ ನೆನಪಿನಲ್ಲಿ ಉಳಿಯುವಂಥದ್ದು.

ಕೇರಳದಲ್ಲಿ 1966ರಲ್ಲಿ ಜಾಲಿ ಬಾಸ್ಟಿನ್ ಹುಟ್ಟಿದ್ದರೂ, ಬೆಳೆದದ್ದು ಬೆಂಗಳೂರಿನಲ್ಲಿ. ಇಲ್ಲಿಯೇ ನೆಲೆಯೂರಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ಭೀಮ ಸಿನಿಮಾಗಾಗಿ ಕೆಲಸ ಮಾಡಿದ್ದರು.

ಡಿಸೆಂಬರ್ ಬಂತೆಂದರೆ ಒಂದು ರೀತಿಯಲ್ಲಿ ಚಿತ್ರೋದ್ಯಮಕ್ಕೆ ಭಯ ಕಾಡುತ್ತದೆ. ಹಲವು ವರ್ಷಗಳಿಂದ ಡಿಸೆಂಬರ್ ನಲ್ಲಿ ಚಿತ್ರೋದ್ಯಮ ಅನೇಕ ಗಣ್ಯರನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಲೀಲಾವತಿ ಅವರನ್ನು ಕಳೆದುಕೊಂಡು ಚಿತ್ರೋದ್ಯಮ ದುಃಖದಲ್ಲಿತ್ತು. ಈಗ ಜಾಲಿ ಕೂಡ ಚಿತ್ರೋದ್ಯಮದಿಂದ ಮರೆಯಾಗಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

11 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

12 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

12 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

12 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 hours ago