Featured

‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ -Vishwanews24

‘ಸ್ಯಾಟಲೈಟ್ ಮ್ಯಾನ್’ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನ: ಗೂಗಲ್ ಡೂಡಲ್ ಗೌರವ -Vishwanews24

ಬೆಂಗಳೂರು: ‘ಸ್ಯಾಟಲೈಟ್ ಮ್ಯಾನ್’ ಎಂಬ ಬಿರುದಾಂಕಿತ ವಿಜ್ಞಾನಿ, ಇಸ್ರೋ ಮಾಜಿ ಮುಖ್ಯಸ್ಥರಾದ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನವನ್ನು ಗೂಗಲ್ ತನ್ನ ಡೂಡಲ್ ಮೂಲಕ ಬುಧವಾರ ವಿಶಿಷ್ಟವಾಗಿ ಆಚರಿಸಿದೆ.

ರಾಮಚಂದ್ರರಾವ್ ಉಡುಪಿ ಸಮೀಪದ ‘ಮಾರ್ಪಳ್ಳಿ’ಯಲ್ಲಿ ಮಾರ್ಚ್ 10, 1932ರಲ್ಲಿ ಜನಿಸಿದರು. ಇವರ ತಾಯಿ ಕೃಷ್ಣವೇಣೀಯಮ್ಮ, ತಂದೆ, ಲಕ್ಷ್ಮೀನಾರಾಯಣರಾವ್. ಇವರದು ಕೃಷಿಕ ಕುಟುಂಬ. ಡಾ ಯು.ಆರ್.ರಾವ್, ಎಂದೇ ಚಿರಪರಿಚಿತರಾಗಿರುವ ಉಡುಪಿ ರಾಮಚಂದ್ರರಾವ್, ‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ’ (ಇಸ್ರೋ)ಯ ಮಾಜಿ ಮುಖ್ಯಸ್ಥರಾಗಿ ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ. ರಾಮಚಂದ್ರ ರಾವ್, ಅಂತರರಾಷ್ಟ್ರೀಯ ವೈಮಾನಿಕ ಫೆಡರೇಷನ್‌ ಸಂಸ್ಥೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಅತ್ಯುತ್ತಮ ಸೇವೆಸಲ್ಲಿಸಿದವರಲ್ಲಿ ಪ್ರಮುಖರು.

ಕಾಪು : ಮಾ.13 ರಂದು ಪೊಲಿಪು ದರ್ಗಾ ಉರೂಸ್, ಹಾಗೂ ಮಾ. 14 ರಂದು ಖಾಝಿ ಸ್ವೀಕಾರ -Vishwanews24

ರಾಮಚಂದ್ರರಾಯರು, ಉಡುಪಿ, ಅನಂತಪುರ, ಮದ್ರಾಸ್, ಬನಾರಸ್ ಮೊದಲಾದ ಸ್ಥಳಗಳಲ್ಲಿ ಅಧ್ಯಯನ ಮಾಡಿದರು. ಭಾರತದ ಬಾಹ್ಯಾಕಾಶ ಯೋಜನೆಯ ಪಿತಾಮಹ ಎಂದೇ ಖ್ಯಾತರಾಗಿದ್ದ ವಿಕ್ರಮ್ ಸಾರಾಭಾಯಿಯವರ ಮಾರ್ಗದರ್ಶನದಲ್ಲಿ ವಿಶ್ವಕಿರಣಗಳ ಬಗೆಗೆ ಅಧ್ಯಯನ ಮಾಡಿ ಗುಜರಾತ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದರು. ಬಳಿಕ ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿ. ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಸಂಶೋಧಕರಾಗಿ, ಉಪನ್ಯಾಸಕರಾಗಿ ದುಡಿದು, 1966 ರಲ್ಲಿ ಭಾರತಕ್ಕೆ ಮರಳಿದರು.

ಉಡುಪಿ : ಸೇನಾ ನೇಮಕಾತಿ ರ‍್ಯಾಲಿಗೆ ಸಂಪೂರ್ಣ ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಮೊದಲಿಗೆ ‘ಅಹಮದಾಬಾದಿನ ಫಿಜಿಕಲ್ ರಿಸರ್ಚ್ ಲೆಬೊರೆಟರಿ’ಯಲ್ಲಿ ಪ್ರಾಧ್ಯಾಪಕರಾಗಿದ್ದ ಪ್ರೊ.ಯು.ಆರ್.ರಾವ್ ಆ ಬಳಿಕ ಇಸ್ರೊದಲ್ಲಿ ಸೇವೆಗೈದರು. ಬಾಹ್ಯಾಕಾಶ ಕಕ್ಷೆಗೆ ಅನೇಕ ಉಪಗ್ರಹಗಳನ್ನುಸೇರಿಸಿದ ಕೀರ್ತಿ ಡಾ.ಯು.ಆರ್.ರಾವ್ ಅವರದು.

ಇವರ ಸಾಧನೆಯನ್ನು ಪರಿಗಣಿಸಿ ಭಾರತದ ಎರಡನೇ ಅತಿ ಶ್ರೇಷ್ಠ ಪ್ರಶಸ್ತಿ ಪದ್ಮ ವಿಭೂಷಣ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ನಾಸಾ ಪುರಸ್ಕಾರ ಮೊದಲಾದ ಗೌರವಗಳು ಲಭಿಸಿವೆ. ಇದರ ಜೊತೆಗೆ ‘ಪ್ರತಿಷ್ಠಿತ ಸ್ಯಾಟಲೈಟ್ ಹಾಲ್ ಆಫ್ ಫೇಮ್’ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರು 2017ರ ಜುಲೈ 24 ರಂದು ಬೆಂಗಳೂರಿನಲ್ಲಿ ನಿಧನರಾದರು.

ಮಂಗಳೂರು:ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ ವಿತರಣೆ ಮಾಡುವುದು ಕಡ್ಡಾಯ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago