ಕೊಪ್ಪಳ : ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ನಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನಾಲ್ವರು ಖದೀಮರು ಬರೋಬ್ಬರಿ 90 ಲಕ್ಷ ರೂಪಾಯಿ ಮೌಲ್ಯದ ಬಂಗಾರವನ್ನು ದರೋಡೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ಸಂಭವಿಸಿದೆ. ಹೋಟೆಲ್ ಒಂದರ ಮುಂಭಾಗದಲ್ಲಿ ಈ ಕೃತ್ಯ ನಡೆದಿದ್ದು, ದರೋಡೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
‘ಶ್ರೀ ಕುಮಾರ್’ ಹೆಸರಿನ ಖಾಸಗಿ ಬಸ್ ಕೊಪ್ಪಳದ ಹೊರವಲಯದಲ್ಲಿ ರಾತ್ರಿ ಊಟಕ್ಕಾಗಿ ಹೋಟೆಲ್ ಒಂದರ ಬಳಿ ನಿಂತಿತ್ತು. ಬಸ್ನಲ್ಲಿದ್ದ ಪ್ರಯಾಣಿಕರಾದ ಮಹಮ್ಮದ್ ಮತ್ತು ಇರ್ಷಾದ್ ಎಂಬುವವರು ಊಟಕ್ಕೆ ಕೆಳಗಿಳಿದಿದ್ದರು. ಈ ಸಮಯಕ್ಕಾಗಿ ಕಾಯುತ್ತಿದ್ದ ಖದೀಮರು, ಕ್ಷಣಾರ್ಧದಲ್ಲಿ ಬಸ್ ಹತ್ತಿ ಅವರ ಬ್ಯಾಗಿನಲ್ಲಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ:👇
ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಮೊದಲೇ ಸಂಚು ರೂಪಿಸಿ ಈ ಕೃತ್ಯವನ್ನು ಮಾಡಿದ್ದಾರೆ.
ದರೋಡೆಕೋರರು ಬಸ್ ಹತ್ತುವುದು ಮತ್ತು ಬಂಗಾರದ ಚೀಲದೊಂದಿಗೆ ಪರಾರಿಯಾಗುವ ದೃಶ್ಯಗಳು ಹೋಟೆಲ್ನ ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಈ ದೃಶ್ಯಾವಳಿಗಳನ್ನು ಆಧರಿಸಿ ಕೊಪ್ಪಳ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.
ಇದನ್ನೂ ಓದಿ:👇
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…