Featured

ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ಯುವತಿ ಸಾವು , ಯುವಕ ಚೇತರಿಕೆ – Vishwanews24

ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು : ಯುವತಿ ಸಾವು – ಯುವಕ ಚೇತರಿಕೆ

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.

ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ಘಟನೆ ವಿವರ: ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಮದುವೆಗೆ ಪೋಷಕರು ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ಈ ಹಿನ್ನೆಲಯಲ್ಲಿ ಜೋಡಿ ಈ ತೀರ್ಮಾನಕ್ಕೆ ಬಂದಿದೆ.

ಸಾಯೋದಕ್ಕೂ ಮುನ್ನ ನಮಗೆ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗ್ತಾ ಇದ್ದೇವೆ ಎಂದು ಯುವತಿ ಫೋನ್ ಮಾಡಿ ಹೇಳಿದ್ದಳು. ಬಳಿಕ ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಕುಡಿದು ಮಲಗಿದ್ದಾರೆ. ಈ ನಡುವೆ ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್ ನಲ್ಲಿದ್ದವರಿಗೆ ಅನುಮಾನ ಬಂದಿದೆ. ವಿಷದ ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ಮಾಡಿದರು. ಆದರೆ ಯುವತಿ ಬದುಕುಳಿಯಲಿಲ್ಲ. ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ.

ಈ ಸಂಬಂಧ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago