ಬೆಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಕಳ ಶಾಸಕ, ಸಚಿವ ಸುನಿಲ್ ಕುಮಾರ್, ‘ನಮ್ಮ ಅನುಮಾನವೀಗ ನಿಜವಾಗಿದೆ’ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ. ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.
ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ‘ವೋಟು, ನೋಟು’ ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನು ಮನ ಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…