ಬೆಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಕಳ ಶಾಸಕ, ಸಚಿವ ಸುನಿಲ್ ಕುಮಾರ್, ‘ನಮ್ಮ ಅನುಮಾನವೀಗ ನಿಜವಾಗಿದೆ’ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ. ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.
ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ. ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ‘ವೋಟು, ನೋಟು’ ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನು ಮನ ಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ” ತನು- ಮನ-ಧನ” – ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…