ಕಾಪು : ಕಾಪು ಪುರಸಭೆ ಅಂದ ತಕ್ಷಣ ಪಕ್ಕನೆ ಹೆಸರು ಕೇಳಿಬರುವುದು ಮುಖ್ಯಾಧಿಕಾರಿಯಾಗಿದ್ದ ರಾಯಪ್ಪನವರದು. ನಿಷ್ಠಾವಂತ, ಭ್ರಷ್ಟಾಚಾರ ರಹಿತ ಅಧಿಕಾರಿ ಅಂತಾನೆ ಹೆಸರು ಪಡೆದಿದ್ದ ರಾಯಪ್ಪನವರಿಗೆ ಚುನಾವಣೆ ನೆಪದಲ್ಲಿ ಮೂಡಬಿದ್ರೆ ಪುರಸಭೆಗೆ ವರ್ಗಾವಣೆಯಾಗಿದೆ.
ಸ್ವಚ್ಛ ಕಾಪುವಿಗೆ ಶ್ರಮಿಸಿದ್ಧ ಅಧಿಕಾರಿಯ ವರ್ಗಾವಣೆ ಕಾಪುವಿನ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಕೆಲಸ ಅಂದರೆ ಅಧಿಕಾರಿಗಳು ಬಂದೇನೋ ಹೋದೆನೋ ಅನ್ನುವ ಸ್ಥಿತಿ ಇರುವಾಗ ಅಂತಹ ಅಧಿಕಾರಿ ವರ್ಗಕ್ಕೆ ಇವರು ತದ್ವಿರುದ್ಧ.ಬೆಳಗ್ಗೆ ಆರು ಗಂಟೆಗೆ ಹಾಜರಿರುತ್ತಿದ್ದ ಮುಖ್ಯಾಧಿಕಾರಿ ಗೂಡಂಗಡಿ, ಹೋಟೆಲ್, ಬಾರ್ ಮಾಲಕರಿಗೆ ಮತ್ತು ಅಲ್ಲಲ್ಲಿ ಪಾನ್ ತಿಂದು ಉಗಿಯುವ ವಲಸೆ ಕಾರ್ಮಿಕರ ಪಾಲಿಗೆ ಸಿಂಹಸ್ವಪ್ನವಾಗಿದ್ದರು. ಸ್ವಚ್ಛತೆಯ ಬಗೆಯಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಕಾರ್ಯ ನಿರ್ವಹಿಸುತ್ತಿದ್ದ ಕಡಕ್ ಅಧಿಕಾರಿ ರಾಯಪ್ಪ. ಮನ ಬಂದಂತೆ ಅಲ್ಲಲ್ಲಿ ನಡೆಯುತ್ತಿದ್ದ ಶುಕ್ರವಾರ ಸಂತೆ ವ್ಯಾಪಾರವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲಬೇಕಾಗಿದೆ,ನಗರದಲ್ಲಿ ಗುಡ್ಡೆ ಬೀಳುತ್ತಿದ್ದ ಕಸದ ರಾಶಿಗೆ ಮುಕ್ತಿ ನೀಡಿದು ್ದ ಮತ್ತು ಮನೆಮನೆಗೆ ಗಾಡಿ ಕಳುಹಿಸಿ ಪ್ಲಾಸ್ಟಿಕ್ ಕಸ ಮತ್ತು ಹಸಿ ಕಸವನ್ನು ವಿಂಗಡಿಸಿ ತ್ಯಾಜ್ಯ ನಿರ್ವಹಣೆಯ ಮಾಡುವ ಕಾರ್ಯ ನಾಗರಿಕರಿಂದ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲಿ ಕಾಪುವಿಗೆ ಹೆಸರು ತಂದುಕೊಟ್ಟಿತ್ತು.ಅಂತಹ ರಾಯಪ್ಪನವರನ್ನ ಬಾಯಿ ತುಂಬಾ ಹೊಗಲಿ ಶ್ಲಾಘಿಸಿದ್ಧ ಅಧಿಕಾರಿಗೆ ಚುನಾವಣಾ ನೆಪದಲ್ಲಿ ವರ್ಗಾವಣೆಯಾಗಿರುವುದು ನಾಗರಿಕರ ಆಕ್ರೋಶಕ್ಕೆ ಮತ್ತು ಬೇಸರಕ್ಕೆ ಕಾರಣವಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…