ಮಂಗಳೂರು,: ಪಣಂಬೂರು ಬೀಚ್ ನಲ್ಲಿರುವ ಆಹಾರ ಮಳಿಗೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ ಹತ್ತಕ್ಕೂ ಅಧಿಕ ಅಂಗಡಿಗಳಲ್ಲಿ ಸ್ವಚ್ಛತೆಯ ಕೊರತೆ ಕಂಡು ಬಂದಿರುವುದರಿಂದ ತಕ್ಷಣ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.
ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ ಸಹಿತ ಬ್ರಾಂಡ್ ಮಂಗಳೂರಿನ ಪರಿಕಲ್ಪನೆಯಲ್ಲಿ ಸಮುದ್ರ ಕಿನಾರೆಯ ಸ್ವಚ್ಛತೆಗೆ ಯೋಜನೆಯನ್ನು ಹಮ್ಮಿಕೊಂಡು ಅದರಂತೆ ಜಿಲ್ಲಾಧಿಕಾರಿ ಉದ್ಘಾಟನೆಗೆ ಆಗಮಿಸಿದ್ದರು. ಬಳಿಕ ಆಹಾರ ಸ್ಟಾಲ್ ಗಳು ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಸರ ಸ್ವಚ್ಛತೆಯ ಕುರಿತು ಕ್ಲಾಸ್ ತೆಗೆದುಕೊಂಡರು.
ಈ ನಡುವೆ ಶೌಚಾಲಯದ ಮುಂಭಾಗ ಅಕ್ರಮವಾಗಿ ಕಟ್ಟಲ್ಪಟ್ಟ ಗೋಬಿ ಮಂಚೂರಿ ಅಂಗಡಿಗೆ ತೆರಳಿದ ಅವರು ಅಲ್ಲಿಯ ಶುಚಿತ್ವದ ಕೊರತೆ ಕಂಡು ತೀವ್ರ ಆಕ್ರೋಷಿತರಾಗಿ ತಕ್ಷಣ ಅಂಗಡಿ ಮುಚ್ಚುವಂತೆ ಆದೇಶ ನೀಡಿದ್ದಾರೆ. ಕೊಳೆತ ತರಕಾರಿಗಳು, ಹಲವು ದಿನಗಳಿಂದ ಉಪಯೋಗಿಸುತ್ತಿರುವ ಅಡುಗೆ ಎಣ್ಣೆ ಹಾಗೂ ಶೌಚಾಲಯವನ್ನೇ ದಿನಸಿ ಸಾಮಾನುಗಳನ್ನು ಸಂಗ್ರಹಿಸಿ ಇಡಲು ಕೋಣೆಯನ್ನಾಗಿ ಪರಿವರ್ತಿಸಿದನ್ನು ಕಂಡು ದಿಗ್ಗಮೆಗೊಂಡರು.
ಬಳಿಕ ಸಮೀಪದ ಎಲ್ಲಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಶುಚಿತ್ವದ ಕೊರತೆ ಕಂಡು ಬಂದ ಮಳಿಗೆಗಳ ಮೇಲೆ ಬೀಗ ಮುದ್ರಿಸುವಂತೆ ಸೂಚನೆ ನೀಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಫಾಸ್ಟ್ ಫುಡ್ ಅಂಗಡಿಯೊಂದರಲ್ಲಂತೂ ಕ್ಯಾಬೇಜ್ ಬಳಸಿ ಗೋಬಿಮಂಚೂರಿ ಮಾಡುತ್ತಿರುವುದು ಕೂಡಾ ಪತ್ತೆಯಾಗಿದೆ. ಎಲ್ಲಾ ಅಂಗಡಿ ಮಾಲಕರಿಗೂ ಕೂಡಾ ಸ್ವಚ್ಛತೆಯ ವಿಚಾರದಲ್ಲಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಒಟ್ಟಿನಲ್ಲಿ, ವ್ಯಾಪಾರದ ದೃಷ್ಟಿಯಿಂದ ಮಾತ್ರ ಗಮನ ನೀಡುತ್ತಿದ್ದ ಅಂಗಡಿ, ಹೋಟೆಲ್ ಮಾಲಕರಿಗೆ ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…