Featured

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್‌ ಮತ್ತು ಮಿಲಿಂದಾ ಗೇಟ್ಸ್‌ ಫೌಂಡೇಷನ್‌ನಿಂದ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಧಾನಿ -Vishwanews24

ನವದೆಹಲಿ, : ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್‌ ಮತ್ತು ಮಿಲಿಂದಾ ಗೇಟ್ಸ್‌ ಫೌಂಡೇಷನ್‌ನಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಅಮೆರಿಕ ಮೂಲದ ಬಿಲ್​ ಮತ್ತು ಮೆಲಿಂಡಾ ಗೇಟ್ಸ್​ ಪ್ರತಿಷ್ಠಾನ ಈ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛಭಾರತ ಅಭಿಯಾನಕ್ಕೆ ಪ್ರಶಸ್ತಿ ಲಭ್ಯವಾಗಿದೆ. ಅಮೆರಿಕ ಮೂಲದ ಬಿಲ್​ ಮತ್ತು ಮೆಲಿಂಡಾ ಗೇಟ್ಸ್​ ಪ್ರತಿಷ್ಠಾನ ಈ ಪ್ರಶಸ್ತಿ ನೀಡುತ್ತಿದ್ದು, ಈ ತಿಂಗಳ ಅಂತ್ಯದಲ್ಲಿ ಅವರು ಅಮೆರಿಕಾ ಪ್ರವಾಸ ಕೈಗೊಳ್ಳುವ ವೇಳೆ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಈ ಕುರಿತು ಟ್ಟೀಟ್‌ ಮಾಡಿರುವ ಪಿಎಂಒ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್‌, ಪ್ರಧಾನಿ ನರೇಂದ್ರ ಮೋದಿಯವರ “ಪರಿಶ್ರಮಶಾಲಿ ಮತ್ತು ನವೀನ” ಯೋಜನೆಗಳಿಗೆ ಜಗತ್ತಿನಾದ್ಯಂತ ಮೆಚ್ಚುಗೆಗಳು ಹರಿದು ಬರುತ್ತಿವೆ ಎಂದಿದ್ದಾರೆ. ಮತ್ತೊಂದು ಪ್ರಶಸ್ತಿಯ ಮೂಲಕ ಇದು ಭಾರತೀಯರೆಲ್ಲರಿಗೂ ಮತ್ತೊಮ್ಮೆ ಹೆಮ್ಮೆಯ ಕ್ಷಣ ಎಂದು ಟ್ಟೀಟ್‌ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಎನ್​ಡಿಎ ಆಡಳಿತದ ಮೊದಲ ಅವಧಿಯಲ್ಲಿ ರಾಷ್ಟ್ರವನ್ನು ಬಯಲು ಶೌಚ ಮುಕ್ತವನ್ನಾಗಿಸುವ ಉದ್ದೇಶದಿಂದ 2014ರಲ್ಲಿ ಸ್ವಚ್ಛಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. 2019ರ ವೇಳೆಗೆ 9 ಕೋಟಿ ಶೌಚಗೃಹಗಳನ್ನು ನಿರ್ಮಿಸಿ, ದೇಶವನ್ನು ಬಯಲು ಶೌಚ ಮುಕ್ತವನ್ನಾಗಿಸುವ ಗುರಿ ಹಾಕಿಕೊಂಡು, ಅ.2ರ ಗಾಂಧಿ ಜಯಂತಿಯಂದು ಅಭಿಯಾನ ಆರಂಭಿಸಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago