Featured

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್‌ ಮತ್ತು ಮಿಲಿಂದಾ ಗೇಟ್ಸ್‌ ಫೌಂಡೇಷನ್‌ನಿಂದ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಧಾನಿ -Vishwanews24

ನವದೆಹಲಿ, : ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್‌ ಮತ್ತು ಮಿಲಿಂದಾ ಗೇಟ್ಸ್‌ ಫೌಂಡೇಷನ್‌ನಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಅಮೆರಿಕ ಮೂಲದ ಬಿಲ್​ ಮತ್ತು ಮೆಲಿಂಡಾ ಗೇಟ್ಸ್​ ಪ್ರತಿಷ್ಠಾನ ಈ ಪ್ರಶಸ್ತಿ ನೀಡಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛಭಾರತ ಅಭಿಯಾನಕ್ಕೆ ಪ್ರಶಸ್ತಿ ಲಭ್ಯವಾಗಿದೆ. ಅಮೆರಿಕ ಮೂಲದ ಬಿಲ್​ ಮತ್ತು ಮೆಲಿಂಡಾ ಗೇಟ್ಸ್​ ಪ್ರತಿಷ್ಠಾನ ಈ ಪ್ರಶಸ್ತಿ ನೀಡುತ್ತಿದ್ದು, ಈ ತಿಂಗಳ ಅಂತ್ಯದಲ್ಲಿ ಅವರು ಅಮೆರಿಕಾ ಪ್ರವಾಸ ಕೈಗೊಳ್ಳುವ ವೇಳೆ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಈ ಕುರಿತು ಟ್ಟೀಟ್‌ ಮಾಡಿರುವ ಪಿಎಂಒ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್‌, ಪ್ರಧಾನಿ ನರೇಂದ್ರ ಮೋದಿಯವರ “ಪರಿಶ್ರಮಶಾಲಿ ಮತ್ತು ನವೀನ” ಯೋಜನೆಗಳಿಗೆ ಜಗತ್ತಿನಾದ್ಯಂತ ಮೆಚ್ಚುಗೆಗಳು ಹರಿದು ಬರುತ್ತಿವೆ ಎಂದಿದ್ದಾರೆ. ಮತ್ತೊಂದು ಪ್ರಶಸ್ತಿಯ ಮೂಲಕ ಇದು ಭಾರತೀಯರೆಲ್ಲರಿಗೂ ಮತ್ತೊಮ್ಮೆ ಹೆಮ್ಮೆಯ ಕ್ಷಣ ಎಂದು ಟ್ಟೀಟ್‌ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಎನ್​ಡಿಎ ಆಡಳಿತದ ಮೊದಲ ಅವಧಿಯಲ್ಲಿ ರಾಷ್ಟ್ರವನ್ನು ಬಯಲು ಶೌಚ ಮುಕ್ತವನ್ನಾಗಿಸುವ ಉದ್ದೇಶದಿಂದ 2014ರಲ್ಲಿ ಸ್ವಚ್ಛಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. 2019ರ ವೇಳೆಗೆ 9 ಕೋಟಿ ಶೌಚಗೃಹಗಳನ್ನು ನಿರ್ಮಿಸಿ, ದೇಶವನ್ನು ಬಯಲು ಶೌಚ ಮುಕ್ತವನ್ನಾಗಿಸುವ ಗುರಿ ಹಾಕಿಕೊಂಡು, ಅ.2ರ ಗಾಂಧಿ ಜಯಂತಿಯಂದು ಅಭಿಯಾನ ಆರಂಭಿಸಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

60 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago