ನವದೆಹಲಿ: ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿರುವುದನ್ನು ಖಂಡಿಸಿರುವ ಬಿಜೆಪಿ, ‘ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರವನ್ನು ಉತ್ತೇಜಿಸಲು ಕೆಲವರು ಮನಮೋಹನ್ ಸಿಂಗ್ ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದರು’ ಆರೋಪಿಸಿದೆ.
ಅರ್ಥ ವ್ಯವಸ್ಥೆಯ ಸ್ಥಿತಿ ‘ಭಾರಿ ಕಳವಳ’ಕಾರಿಯಾಗಿದೆ. ಕೇಂದ್ರ ಸರ್ಕಾರವು ‘ದ್ವೇಷ ಸಾಧಿಸುವ ರಾಜಕಾರಣ’ವನ್ನು ಬದಿಗಿಟ್ಟು ಆರ್ಥಿಕತೆಯನ್ನು ಸರಿಪಡಿಸುವತ್ತ ಗಮನ ಹರಿಸಬೇಕು. ‘ಮಾನವ ನಿರ್ಮಿತ ಬಿಕ್ಕಟ್ಟಿನಿಂದ’ ಆರ್ಥಿಕತೆಯನ್ನು ಸರಿದಾರಿಗೆ ತರಲು ತಜ್ಞರ ಸಲಹೆ ಪಡೆದುಕೊಳ್ಳಬೇಕು ಎಂದು ಸಿಂಗ್ ಹೇಳಿದ್ದರು. ಮಾತ್ರವಲ್ಲದೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ವಿಚಾರಗಳನ್ನೂ ಅತ್ಯಂತ ಕೆಟ್ಟದಾಗಿ ನಿರ್ವಹಣೆ ಮಾಡಿರುವುದು ಈಗಿನ ಆರ್ಥಿಕ ಕುಸಿತಕ್ಕೆ ಕಾರಣ ಎಂದೂ ಆರೋಪಿಸಿದ್ದರು.
ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ‘ಅವರೊಬ್ಬ(ಮನಮೋಹನ್ ಸಿಂಗ್) ಅರ್ಥಶಾಸ್ತ್ರಜ್ಞ. ಆದರೆ, ಅವರ ಹಿಂದೆ ಇದ್ದ ವ್ಯಕ್ತಿಗಳು ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತವನ್ನು ಉತ್ತೇಜಿಸಲು ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದವು. ಇದರಿಂದ ದೇಶದ ಅರ್ಥ ವ್ಯವಸ್ಥೆಗೆ ಎಷ್ಟು ಅನ್ಯಾಯವಾಗಿದೆ ಎಂಬುದು ನಮಗೆ ಗೊತ್ತಿದೆ’ ಎಂದು ಕಿಡಿಕಾರಿದ್ದಾರೆ.
‘ಮೋದಿ ಸರ್ಕಾರದ ಆರ್ಥಿಕ ನೀತಿಗಳು ದೇಶವು ವಿಶ್ವದ ಬೃಹತ್ ಆರ್ಥಿಕತೆಗಳಲ್ಲಿ ಒಂದಾಗಲು ಸಹಾಯ ಮಾಡಿದೆ. ವಿಶ್ವ ಆರ್ಥಿಕತೆಯೂ ಮಂದಗತಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ದೇಶದ ಅರ್ಥ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶದ ಆರ್ಥಿಕತೆ ಉತ್ತಮ ತಳಪಾಯ ಹೊಂದಿರುವುದೇ ಅದಕ್ಕೆ ಕಾರಣ’ ಎಂದಿದ್ದಾರೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…