ನವದೆಹಲಿ: ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿರುವುದನ್ನು ಖಂಡಿಸಿರುವ ಬಿಜೆಪಿ, ‘ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರವನ್ನು ಉತ್ತೇಜಿಸಲು ಕೆಲವರು ಮನಮೋಹನ್ ಸಿಂಗ್ ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದರು’ ಆರೋಪಿಸಿದೆ.
ಅರ್ಥ ವ್ಯವಸ್ಥೆಯ ಸ್ಥಿತಿ ‘ಭಾರಿ ಕಳವಳ’ಕಾರಿಯಾಗಿದೆ. ಕೇಂದ್ರ ಸರ್ಕಾರವು ‘ದ್ವೇಷ ಸಾಧಿಸುವ ರಾಜಕಾರಣ’ವನ್ನು ಬದಿಗಿಟ್ಟು ಆರ್ಥಿಕತೆಯನ್ನು ಸರಿಪಡಿಸುವತ್ತ ಗಮನ ಹರಿಸಬೇಕು. ‘ಮಾನವ ನಿರ್ಮಿತ ಬಿಕ್ಕಟ್ಟಿನಿಂದ’ ಆರ್ಥಿಕತೆಯನ್ನು ಸರಿದಾರಿಗೆ ತರಲು ತಜ್ಞರ ಸಲಹೆ ಪಡೆದುಕೊಳ್ಳಬೇಕು ಎಂದು ಸಿಂಗ್ ಹೇಳಿದ್ದರು. ಮಾತ್ರವಲ್ಲದೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ವಿಚಾರಗಳನ್ನೂ ಅತ್ಯಂತ ಕೆಟ್ಟದಾಗಿ ನಿರ್ವಹಣೆ ಮಾಡಿರುವುದು ಈಗಿನ ಆರ್ಥಿಕ ಕುಸಿತಕ್ಕೆ ಕಾರಣ ಎಂದೂ ಆರೋಪಿಸಿದ್ದರು.
ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ‘ಅವರೊಬ್ಬ(ಮನಮೋಹನ್ ಸಿಂಗ್) ಅರ್ಥಶಾಸ್ತ್ರಜ್ಞ. ಆದರೆ, ಅವರ ಹಿಂದೆ ಇದ್ದ ವ್ಯಕ್ತಿಗಳು ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತವನ್ನು ಉತ್ತೇಜಿಸಲು ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದವು. ಇದರಿಂದ ದೇಶದ ಅರ್ಥ ವ್ಯವಸ್ಥೆಗೆ ಎಷ್ಟು ಅನ್ಯಾಯವಾಗಿದೆ ಎಂಬುದು ನಮಗೆ ಗೊತ್ತಿದೆ’ ಎಂದು ಕಿಡಿಕಾರಿದ್ದಾರೆ.
‘ಮೋದಿ ಸರ್ಕಾರದ ಆರ್ಥಿಕ ನೀತಿಗಳು ದೇಶವು ವಿಶ್ವದ ಬೃಹತ್ ಆರ್ಥಿಕತೆಗಳಲ್ಲಿ ಒಂದಾಗಲು ಸಹಾಯ ಮಾಡಿದೆ. ವಿಶ್ವ ಆರ್ಥಿಕತೆಯೂ ಮಂದಗತಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ದೇಶದ ಅರ್ಥ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶದ ಆರ್ಥಿಕತೆ ಉತ್ತಮ ತಳಪಾಯ ಹೊಂದಿರುವುದೇ ಅದಕ್ಕೆ ಕಾರಣ’ ಎಂದಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…