ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ. ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು? ಇದಕ್ಕೆಲ್ಲ ಯಾರು ಹೊಣೆಗಾರಿಕೆ? ಪ್ರಧಾನಿ ಮೋದಿಯವರು ಯಾಕೆ ಅಮಿತ್ ಶಾ ಅವರಿಗೆ ಹೆದರುತ್ತಿದ್ದಾರೆ. ನಮ್ಮ ಗುಟ್ಟು ಹೊರಗೆ ಬರುತ್ತೆ ಅಂತಾನಾ? ಚಪ್ಪನ್ ಇಂಚ್ ಎಲ್ಲಿ ಹೋಯ್ತು? ಬೇರೆ ದೇಶದಲ್ಲಿ ಆಗಿದ್ದರೆ ಇಷ್ಟೊತ್ತಿಗೆ ಗೃಹ ಸಚಿವರು ರಾಜೀನಾಮೆ ಕೊಡುತ್ತಿದ್ದರು. ನಿಮ್ಮ ಆರ್ಎಸ್ಎಸ್ನವರನ್ನು ಗಡಿಗೆ ಕಳುಹಿಸಿ” ಎಂದು ವಾಗ್ದಾಳಿ ನಡೆಸಿದರು.
“ಇನ್ನೂ ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು? ಇದರ ಹೊಣೆಗಾರಿಕೆ ಯಾರು? ನಾವು ವಿರೋಧ ಪಕ್ಷನಾ? ಮಾತೆತ್ತಿದ್ದರೆ ಅಭಿನವ ಸರ್ದಾರ್ ಪಟೇಲ್ ಎನ್ನುತ್ತಾರೆ, 56 ಇಂಚಿನ ಎದೆ ಎನ್ನುತ್ತಾರೆ. ಕಳೆದ 10 ವರ್ಷದ್ದನ್ನ ಲೆಕ್ಕ ತೆಗೆದುಕೊಳ್ಳಬೇಕು, ಇವರು ಮೊದಲು ರಾಜೀನಾಮೆ ಕೊಡಲಿ ಆಮೇಲೆ ಮಾತಾಡೋಣ ಇವರಿಗೆ ಏನೂ ಪ್ರಶ್ನೆ ಮಾಡೋಹಾಗಿಲ್ವಾ? ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಅಕೌಂಟೆಬಿಲಿಡಿ ಇರೋದಾ? ಕೇಂದ್ರ ಸರ್ಕಾರಕ್ಕೆ ಇಲ್ಲವಾ?” ಎಂದು ಪ್ರಶ್ನಿಸಿದ್ದಾರೆ.
“ಈಗ ಅಭಿನವ ಸರ್ದಾರ ಪಟೇಲ್ ಎಲ್ಲಿ ಮಾಯವಾದ್ರು? ಈಗ ಆರ್ಎಸ್ಎಸ್ನವರು ಎಲ್ಲೋದ್ರು? ಈ ಸಂದರ್ಭದಲ್ಲಿ ಏನು ಹೇಳ್ತಾರೆ? ದೊಡ್ಡ ದೊಡ್ಡ ಮಾತಾಡ್ತಾರಲ್ಲ ಇದೆಲ್ಲ ಸೋಷಿಯಲ್ ಮೀಡಿಯಾಗೆ ಮಾತ್ರ ಸೀಮಿತ” ಎಂದು ಕಿಡಿಕಾರಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…