ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ. ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು? ಇದಕ್ಕೆಲ್ಲ ಯಾರು ಹೊಣೆಗಾರಿಕೆ? ಪ್ರಧಾನಿ ಮೋದಿಯವರು ಯಾಕೆ ಅಮಿತ್ ಶಾ ಅವರಿಗೆ ಹೆದರುತ್ತಿದ್ದಾರೆ. ನಮ್ಮ ಗುಟ್ಟು ಹೊರಗೆ ಬರುತ್ತೆ ಅಂತಾನಾ? ಚಪ್ಪನ್ ಇಂಚ್ ಎಲ್ಲಿ ಹೋಯ್ತು? ಬೇರೆ ದೇಶದಲ್ಲಿ ಆಗಿದ್ದರೆ ಇಷ್ಟೊತ್ತಿಗೆ ಗೃಹ ಸಚಿವರು ರಾಜೀನಾಮೆ ಕೊಡುತ್ತಿದ್ದರು. ನಿಮ್ಮ ಆರ್ಎಸ್ಎಸ್ನವರನ್ನು ಗಡಿಗೆ ಕಳುಹಿಸಿ” ಎಂದು ವಾಗ್ದಾಳಿ ನಡೆಸಿದರು.
“ಇನ್ನೂ ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು? ಇದರ ಹೊಣೆಗಾರಿಕೆ ಯಾರು? ನಾವು ವಿರೋಧ ಪಕ್ಷನಾ? ಮಾತೆತ್ತಿದ್ದರೆ ಅಭಿನವ ಸರ್ದಾರ್ ಪಟೇಲ್ ಎನ್ನುತ್ತಾರೆ, 56 ಇಂಚಿನ ಎದೆ ಎನ್ನುತ್ತಾರೆ. ಕಳೆದ 10 ವರ್ಷದ್ದನ್ನ ಲೆಕ್ಕ ತೆಗೆದುಕೊಳ್ಳಬೇಕು, ಇವರು ಮೊದಲು ರಾಜೀನಾಮೆ ಕೊಡಲಿ ಆಮೇಲೆ ಮಾತಾಡೋಣ ಇವರಿಗೆ ಏನೂ ಪ್ರಶ್ನೆ ಮಾಡೋಹಾಗಿಲ್ವಾ? ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಅಕೌಂಟೆಬಿಲಿಡಿ ಇರೋದಾ? ಕೇಂದ್ರ ಸರ್ಕಾರಕ್ಕೆ ಇಲ್ಲವಾ?” ಎಂದು ಪ್ರಶ್ನಿಸಿದ್ದಾರೆ.
“ಈಗ ಅಭಿನವ ಸರ್ದಾರ ಪಟೇಲ್ ಎಲ್ಲಿ ಮಾಯವಾದ್ರು? ಈಗ ಆರ್ಎಸ್ಎಸ್ನವರು ಎಲ್ಲೋದ್ರು? ಈ ಸಂದರ್ಭದಲ್ಲಿ ಏನು ಹೇಳ್ತಾರೆ? ದೊಡ್ಡ ದೊಡ್ಡ ಮಾತಾಡ್ತಾರಲ್ಲ ಇದೆಲ್ಲ ಸೋಷಿಯಲ್ ಮೀಡಿಯಾಗೆ ಮಾತ್ರ ಸೀಮಿತ” ಎಂದು ಕಿಡಿಕಾರಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…