ಬೆಂಗಳೂರು : ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ. ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು? ಇದಕ್ಕೆಲ್ಲ ಯಾರು ಹೊಣೆಗಾರಿಕೆ? ಪ್ರಧಾನಿ ಮೋದಿಯವರು ಯಾಕೆ ಅಮಿತ್ ಶಾ ಅವರಿಗೆ ಹೆದರುತ್ತಿದ್ದಾರೆ. ನಮ್ಮ ಗುಟ್ಟು ಹೊರಗೆ ಬರುತ್ತೆ ಅಂತಾನಾ? ಚಪ್ಪನ್ ಇಂಚ್ ಎಲ್ಲಿ ಹೋಯ್ತು? ಬೇರೆ ದೇಶದಲ್ಲಿ ಆಗಿದ್ದರೆ ಇಷ್ಟೊತ್ತಿಗೆ ಗೃಹ ಸಚಿವರು ರಾಜೀನಾಮೆ ಕೊಡುತ್ತಿದ್ದರು. ನಿಮ್ಮ ಆರ್ಎಸ್ಎಸ್ನವರನ್ನು ಗಡಿಗೆ ಕಳುಹಿಸಿ” ಎಂದು ವಾಗ್ದಾಳಿ ನಡೆಸಿದರು.
“ಇನ್ನೂ ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು? ಇದರ ಹೊಣೆಗಾರಿಕೆ ಯಾರು? ನಾವು ವಿರೋಧ ಪಕ್ಷನಾ? ಮಾತೆತ್ತಿದ್ದರೆ ಅಭಿನವ ಸರ್ದಾರ್ ಪಟೇಲ್ ಎನ್ನುತ್ತಾರೆ, 56 ಇಂಚಿನ ಎದೆ ಎನ್ನುತ್ತಾರೆ. ಕಳೆದ 10 ವರ್ಷದ್ದನ್ನ ಲೆಕ್ಕ ತೆಗೆದುಕೊಳ್ಳಬೇಕು, ಇವರು ಮೊದಲು ರಾಜೀನಾಮೆ ಕೊಡಲಿ ಆಮೇಲೆ ಮಾತಾಡೋಣ ಇವರಿಗೆ ಏನೂ ಪ್ರಶ್ನೆ ಮಾಡೋಹಾಗಿಲ್ವಾ? ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಅಕೌಂಟೆಬಿಲಿಡಿ ಇರೋದಾ? ಕೇಂದ್ರ ಸರ್ಕಾರಕ್ಕೆ ಇಲ್ಲವಾ?” ಎಂದು ಪ್ರಶ್ನಿಸಿದ್ದಾರೆ.
“ಈಗ ಅಭಿನವ ಸರ್ದಾರ ಪಟೇಲ್ ಎಲ್ಲಿ ಮಾಯವಾದ್ರು? ಈಗ ಆರ್ಎಸ್ಎಸ್ನವರು ಎಲ್ಲೋದ್ರು? ಈ ಸಂದರ್ಭದಲ್ಲಿ ಏನು ಹೇಳ್ತಾರೆ? ದೊಡ್ಡ ದೊಡ್ಡ ಮಾತಾಡ್ತಾರಲ್ಲ ಇದೆಲ್ಲ ಸೋಷಿಯಲ್ ಮೀಡಿಯಾಗೆ ಮಾತ್ರ ಸೀಮಿತ” ಎಂದು ಕಿಡಿಕಾರಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…