Featured

ಸ್ವಪ್ರಯತ್ನದಿಂದ ದೊಡ್ಡ ದೊಡ್ಡ ಸಂಖ್ಯೆಗಳನ್ನು ಕೂಡಿಸಿ, ಗುಣಿಸಿ, ಭಾಗಿಸಿ ಸೆಕೆಂಡುಗಳಲ್ಲಿ ಉತ್ತರಿಸುವ ೧೧ ವರ್ಷದ ಶ್ರೀನಿಧಿ ; ಈತನಿಗೆ ಜಗತ್ತಿನ ಅತಿ ವೇಗದ ಮಾನವ ಕ್ಯಾಲ್ಕುಲೇಟರ್‌ ಹಾಗೂ ಪ್ರಸಿದ್ಧ ಗಣಿತಜ್ಞನಾಗುವ ಆಸೆ..

ಉಡುಪಿ: ಬ್ರಹ್ಮಾವರದ ಲಿಟ್ಲರಾಕ್‌ ಇಂಡಿಯನ್‌ ಸ್ಕೂಲ್‌ನಲ್ಲಿ ಆರನೇಯ ತರಗತಿ ಓದುತ್ತಿರುವ ಈ ಪೋರನ ಹೆಸರು ಶ್ರೀನಿಧಿ ನೀರಮಾನ್ವಿ ..ವಯಸ್ಸು 11.  ಹತ್ತು ಅಂಕಿಗಳನ್ನು ಹತ್ತು ಸಾಲುಗಳಲ್ಲಿ ಕೂಡಿಸಲು ಹೇಳಿದರೆ 25 ಸೆಕಂಡುಗಳಲ್ಲಿ ಮುಗಿಸಬಲ್ಲ. ಇದರ ವಿಶ್ವ ದಾಖಲೆ 10 ಸೆಕೆಂಡು. ಎಂಟು ಅಂಕಿಗಳನ್ನು ಎಂಟು ಅಂಕಿಗಳಿಂದ ಗುಣಿಸಲು ಹೇಳಿದರೆ 40 ಸೆಕೆಂಡುಗಳು ಸಾಕು. ಇದರ ವಿಶ್ವ ದಾಖಲೆ 19 ಸೆಕೆಂಡು. ಕ್ಲಿಷ್ಟಕರವಾದ ವರ್ಗಮೂಲವನ್ನು 21 ಸೆಕೆಂಡುಗಳಲ್ಲಿ ಹೇಳಬಲ್ಲ. ಇದರ ವಿಶ್ವದಾಖಲೆ 13 ಸೆಕೆಂಡು. ನಿಮ್ಮ ಹುಟ್ಟಿದ ದಿನಾಂಕವನ್ನು ಹೇಳಿದರೆ ತತ್‌ಕ್ಷಣ ವಾರಗಳನ್ನು ಹೇಳುತ್ತಾನೆ ..

ಶ್ರೀನಿಧಿ ಅಬಾಕಸ್‌ ಮತ್ತು ವೇದ ಗಣಿತ ಕಲಿತಿದ್ದಾನೆ. ಅಬಾಕಸ್‌ ಉಪ ಕರಣಾಧಾರಿತವಾದರೆ ವೇದ ಗಣಿತದಿಂದ ಕ್ಷಿಪ್ರ ಗತಿಯಲ್ಲಿ ಲೆಕ್ಕ ಹಾಕುವ ಸಾಮರ್ಥ್ಯ ಬೆಳೆಸುತ್ತದೆ. ಈತನ ಗುರಿ ಗಣಿತಜ್ಞನಾಗಿ ಸೂತ್ರಗಳನ್ನು ಕಂಡು ಹಿಡಿಯುವುದು.

ಶ್ರೀನಿಧಿ ಜರ್ಮನಿಯ ವೋಲ್ಟ್ಸ್ ಬರ್ಗ್‌ನಲ್ಲಿ ಇತ್ತೀಚೆಗಷ್ಟೇ ಮುಗಿದ 8 ನೇ ಮೆಂಟಲ್‌ ಕ್ಯಾಲ್ಕುಲೇಶನ್‌ ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ. ಜಗತ್ತಿನ ವಿವಿಧ ದೇಶಗಳ 40 ಮಂದಿ ಭಾಗವಹಿಸಿದ್ದರು. ಜರ್ಮನಿಯ ರೆಕಾರ್ಡ್‌ ಹೋಲ್ಡರ್‌ ಸಂಸ್ಥೆಯೊಂದು ಇದನ್ನು ಆಯೋಜಿಸಿದ್ದು, ಭಾರತದಿಂದ ಪಾಲ್ಗೊಂಡ ನಾಲ್ವರ ಪೈಕಿ ಕರ್ನಾಟಕದಿಂದ ಶ್ರೀನಿಧಿ ಮಾತ್ರ. ಒಟ್ಟೂ 40 ಮಂದಿ ಸ್ಪರ್ಧಿಗಳಲ್ಲಿ ಈತನೇ ಕಿರಿಯ.

ರಾಜ್ಯದಿಂದ ಯಾರೂ ಇದುವರೆಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಿರಲಿಲ್ಲ ಎನ್ನುತ್ತಾರೆ ಅವನ ತಂದೆ ದುರ್ಗಾಪ್ರಸಾದ್‌. ಅಂಕ ಗಣಿತದ ಪ್ರತಿಭೆಗಳನ್ನು ಪ್ರೋತ್ಸಾಹಿಸಲು 2 ವರ್ಷಗಳಿಗೊಮ್ಮೆ ಈ ಸ್ಪರ್ಧೆ ನಡೆಸಲಾಗುತ್ತದೆ. ಅಂತರ್ಜಾಲದಲ್ಲಿ ಪೂರ್ವ ನಿಗದಿಯಂತೆ ಸ್ಪರ್ಧೆಯ ಪ್ರಕಟನೆ ನೀಡಲಾಗುವುದು. ಇದೊಂದು ಮುಕ್ತ ಸ್ಪರ್ಧೆ ಆಸಕ್ತರು ವಯೋಮಿತಿಯ ಭೇದವಿಲ್ಲದೆ ನೋಂದಣಿ ಮಾಡಿಕೊಳ್ಳಬಹುದು.

ಶ್ರೀನಿಧಿಯ ತಂದೆ ಮತ್ತು ತಾಯಿ ಮೂಲತಃ ರಾಯಚೂರು ಜಿಲ್ಲೆ ಮಾನ್ವಿ ಸಮೀಪದ ನೀರಮಾನವಿಯವರಾದ ಬಳ್ಳಾರಿ ನಿವಾಸಿ, ಗಣಿ ಎಂಜಿನಿಯರ್‌ ದುರ್ಗಾಪ್ರಸಾದ್‌ ಮತ್ತು ಉಡುಪಿ ಎಲ್ಲೆ„ಸಿ ಸಹಾಯಕ ಆಡಳಿತ ಅಧಿಕಾರಿ ವಿ. ಸರಿತಾ. ಶ್ರೀನಿಧಿ ಬಳ್ಳಾರಿಯಲ್ಲಿ ಅಬಾಕಸ್‌ ಕಲಿತಿದ್ದ. ಮೈಸ್‌ನಲ್ಲಿ ವೇದಗಣಿತ ತಿಳಿದ. ದೊಡ್ಡ ದೊಡ್ಡ ಸಂಖ್ಯೆಗಳನ್ನು ಕೂಡಿಸಿ, ಗುಣಿಸಿ, ಭಾಗಿಸುವ, ವರ್ಗಮೂಲ ಕ್ಯಾಲೆಂಡರ್‌ ದಿನ ಪತ್ತೆ ಹಚ್ಚುವುದನ್ನು ಸ್ವಪ್ರಯತ್ನದಿಂದ ಕಲಿತನಂತೆ. ಈತ ಬ್ರಹ್ಮಾವರದ ಲಿಟ್ಲರಾಕ್‌ ಇಂಡಿಯನ್‌ ಸ್ಕೂಲ್‌ನ ವಿದ್ಯಾರ್ಥಿ. “ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವಕಾಶ ಕಲ್ಪಿಸಿದರೆ ಮಾತ್ರ ಬೆಳೆಯಬಲ್ಲದು’ ಎನ್ನುತ್ತಾರೆ ದುರ್ಗಾಪ್ರಸಾದ್‌.

ನಾನು ಜಗತ್ತಿನ ಅತಿ ವೇಗದ ಮಾನವ ಕ್ಯಾಲ್ಕುಲೇಟರ್‌ ಆಗಬೇಕೆಂದಿದ್ದೇನೆ. ಪ್ರಸಿದ್ಧ ಗಣಿತಜ್ಞನಾಗುತ್ತೇನೆ. ಸುಲಭದ ಸೂತ್ರಗಳನ್ನು ಕಂಡು ಹಿಡಿಯುತ್ತೇನೆ.
ಶ್ರೀನಿಧಿ ನೀರಮಾನವಿ

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago