Featured

ಸ್ವಪ್ರಯತ್ನದಿಂದ ದೊಡ್ಡ ದೊಡ್ಡ ಸಂಖ್ಯೆಗಳನ್ನು ಕೂಡಿಸಿ, ಗುಣಿಸಿ, ಭಾಗಿಸಿ ಸೆಕೆಂಡುಗಳಲ್ಲಿ ಉತ್ತರಿಸುವ ೧೧ ವರ್ಷದ ಶ್ರೀನಿಧಿ ; ಈತನಿಗೆ ಜಗತ್ತಿನ ಅತಿ ವೇಗದ ಮಾನವ ಕ್ಯಾಲ್ಕುಲೇಟರ್‌ ಹಾಗೂ ಪ್ರಸಿದ್ಧ ಗಣಿತಜ್ಞನಾಗುವ ಆಸೆ..

ಉಡುಪಿ: ಬ್ರಹ್ಮಾವರದ ಲಿಟ್ಲರಾಕ್‌ ಇಂಡಿಯನ್‌ ಸ್ಕೂಲ್‌ನಲ್ಲಿ ಆರನೇಯ ತರಗತಿ ಓದುತ್ತಿರುವ ಈ ಪೋರನ ಹೆಸರು ಶ್ರೀನಿಧಿ ನೀರಮಾನ್ವಿ ..ವಯಸ್ಸು 11.  ಹತ್ತು ಅಂಕಿಗಳನ್ನು ಹತ್ತು ಸಾಲುಗಳಲ್ಲಿ ಕೂಡಿಸಲು ಹೇಳಿದರೆ 25 ಸೆಕಂಡುಗಳಲ್ಲಿ ಮುಗಿಸಬಲ್ಲ. ಇದರ ವಿಶ್ವ ದಾಖಲೆ 10 ಸೆಕೆಂಡು. ಎಂಟು ಅಂಕಿಗಳನ್ನು ಎಂಟು ಅಂಕಿಗಳಿಂದ ಗುಣಿಸಲು ಹೇಳಿದರೆ 40 ಸೆಕೆಂಡುಗಳು ಸಾಕು. ಇದರ ವಿಶ್ವ ದಾಖಲೆ 19 ಸೆಕೆಂಡು. ಕ್ಲಿಷ್ಟಕರವಾದ ವರ್ಗಮೂಲವನ್ನು 21 ಸೆಕೆಂಡುಗಳಲ್ಲಿ ಹೇಳಬಲ್ಲ. ಇದರ ವಿಶ್ವದಾಖಲೆ 13 ಸೆಕೆಂಡು. ನಿಮ್ಮ ಹುಟ್ಟಿದ ದಿನಾಂಕವನ್ನು ಹೇಳಿದರೆ ತತ್‌ಕ್ಷಣ ವಾರಗಳನ್ನು ಹೇಳುತ್ತಾನೆ ..

ಶ್ರೀನಿಧಿ ಅಬಾಕಸ್‌ ಮತ್ತು ವೇದ ಗಣಿತ ಕಲಿತಿದ್ದಾನೆ. ಅಬಾಕಸ್‌ ಉಪ ಕರಣಾಧಾರಿತವಾದರೆ ವೇದ ಗಣಿತದಿಂದ ಕ್ಷಿಪ್ರ ಗತಿಯಲ್ಲಿ ಲೆಕ್ಕ ಹಾಕುವ ಸಾಮರ್ಥ್ಯ ಬೆಳೆಸುತ್ತದೆ. ಈತನ ಗುರಿ ಗಣಿತಜ್ಞನಾಗಿ ಸೂತ್ರಗಳನ್ನು ಕಂಡು ಹಿಡಿಯುವುದು.

ಶ್ರೀನಿಧಿ ಜರ್ಮನಿಯ ವೋಲ್ಟ್ಸ್ ಬರ್ಗ್‌ನಲ್ಲಿ ಇತ್ತೀಚೆಗಷ್ಟೇ ಮುಗಿದ 8 ನೇ ಮೆಂಟಲ್‌ ಕ್ಯಾಲ್ಕುಲೇಶನ್‌ ವಿಶ್ವಕಪ್‌ನಲ್ಲಿ ಭಾಗವಹಿಸಿದ್ದ. ಜಗತ್ತಿನ ವಿವಿಧ ದೇಶಗಳ 40 ಮಂದಿ ಭಾಗವಹಿಸಿದ್ದರು. ಜರ್ಮನಿಯ ರೆಕಾರ್ಡ್‌ ಹೋಲ್ಡರ್‌ ಸಂಸ್ಥೆಯೊಂದು ಇದನ್ನು ಆಯೋಜಿಸಿದ್ದು, ಭಾರತದಿಂದ ಪಾಲ್ಗೊಂಡ ನಾಲ್ವರ ಪೈಕಿ ಕರ್ನಾಟಕದಿಂದ ಶ್ರೀನಿಧಿ ಮಾತ್ರ. ಒಟ್ಟೂ 40 ಮಂದಿ ಸ್ಪರ್ಧಿಗಳಲ್ಲಿ ಈತನೇ ಕಿರಿಯ.

ರಾಜ್ಯದಿಂದ ಯಾರೂ ಇದುವರೆಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಿರಲಿಲ್ಲ ಎನ್ನುತ್ತಾರೆ ಅವನ ತಂದೆ ದುರ್ಗಾಪ್ರಸಾದ್‌. ಅಂಕ ಗಣಿತದ ಪ್ರತಿಭೆಗಳನ್ನು ಪ್ರೋತ್ಸಾಹಿಸಲು 2 ವರ್ಷಗಳಿಗೊಮ್ಮೆ ಈ ಸ್ಪರ್ಧೆ ನಡೆಸಲಾಗುತ್ತದೆ. ಅಂತರ್ಜಾಲದಲ್ಲಿ ಪೂರ್ವ ನಿಗದಿಯಂತೆ ಸ್ಪರ್ಧೆಯ ಪ್ರಕಟನೆ ನೀಡಲಾಗುವುದು. ಇದೊಂದು ಮುಕ್ತ ಸ್ಪರ್ಧೆ ಆಸಕ್ತರು ವಯೋಮಿತಿಯ ಭೇದವಿಲ್ಲದೆ ನೋಂದಣಿ ಮಾಡಿಕೊಳ್ಳಬಹುದು.

ಶ್ರೀನಿಧಿಯ ತಂದೆ ಮತ್ತು ತಾಯಿ ಮೂಲತಃ ರಾಯಚೂರು ಜಿಲ್ಲೆ ಮಾನ್ವಿ ಸಮೀಪದ ನೀರಮಾನವಿಯವರಾದ ಬಳ್ಳಾರಿ ನಿವಾಸಿ, ಗಣಿ ಎಂಜಿನಿಯರ್‌ ದುರ್ಗಾಪ್ರಸಾದ್‌ ಮತ್ತು ಉಡುಪಿ ಎಲ್ಲೆ„ಸಿ ಸಹಾಯಕ ಆಡಳಿತ ಅಧಿಕಾರಿ ವಿ. ಸರಿತಾ. ಶ್ರೀನಿಧಿ ಬಳ್ಳಾರಿಯಲ್ಲಿ ಅಬಾಕಸ್‌ ಕಲಿತಿದ್ದ. ಮೈಸ್‌ನಲ್ಲಿ ವೇದಗಣಿತ ತಿಳಿದ. ದೊಡ್ಡ ದೊಡ್ಡ ಸಂಖ್ಯೆಗಳನ್ನು ಕೂಡಿಸಿ, ಗುಣಿಸಿ, ಭಾಗಿಸುವ, ವರ್ಗಮೂಲ ಕ್ಯಾಲೆಂಡರ್‌ ದಿನ ಪತ್ತೆ ಹಚ್ಚುವುದನ್ನು ಸ್ವಪ್ರಯತ್ನದಿಂದ ಕಲಿತನಂತೆ. ಈತ ಬ್ರಹ್ಮಾವರದ ಲಿಟ್ಲರಾಕ್‌ ಇಂಡಿಯನ್‌ ಸ್ಕೂಲ್‌ನ ವಿದ್ಯಾರ್ಥಿ. “ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವಕಾಶ ಕಲ್ಪಿಸಿದರೆ ಮಾತ್ರ ಬೆಳೆಯಬಲ್ಲದು’ ಎನ್ನುತ್ತಾರೆ ದುರ್ಗಾಪ್ರಸಾದ್‌.

ನಾನು ಜಗತ್ತಿನ ಅತಿ ವೇಗದ ಮಾನವ ಕ್ಯಾಲ್ಕುಲೇಟರ್‌ ಆಗಬೇಕೆಂದಿದ್ದೇನೆ. ಪ್ರಸಿದ್ಧ ಗಣಿತಜ್ಞನಾಗುತ್ತೇನೆ. ಸುಲಭದ ಸೂತ್ರಗಳನ್ನು ಕಂಡು ಹಿಡಿಯುತ್ತೇನೆ.
ಶ್ರೀನಿಧಿ ನೀರಮಾನವಿ

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago