Featured

ಸ್ವರಕ್ಷಣೆಗಾಗಿ ಹಾಗೂ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಸಂಪೂರ್ಣ ಬೆಂಬಲ : ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್ – Vishwanews24

ವಾಷಿಂಗ್ಟನ್‌: ‘ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ’ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್‌ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್‌ ಅವರಿಗೆ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವೋಂತಿಪೊರದಲ್ಲಿ ಜೈಷ್‌ ಉಗ್ರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಲು ಜಾನ್‌ ಬೋಲ್ಟನ್‌ ಅವರು ಅಜಿತ್‌ ದೋವಾಲ್‌ ಅವರಿ‌ಗೆ  ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಅಮೆರಿಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

‘ನಾವು ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ ಎಂದು ನಾನು ಇಂದು ಅಜಿತ್‌ ದೋವಾಲ್‌ ಅವರಿಗೆ ತಿಳಿಸಿದ್ದೇನೆ. ಈ ಕುರಿತು ಈ ಬೆಳಿಗ್ಗೆಯಿಂದ ಅವರ ಜತೆ ಎರಡು ಬಾರಿ ಮಾತನಾಡಿದ್ದೇನೆ ಮತ್ತು ಭಯೋತ್ಪಾದಕರ ದಾಳಿಗೆ ಅಮೆರಿಕ ಸಂತಾಪ ವ್ಯಕ್ತಪಡಿಸುತ್ತದೆ’ ಎಂದು ಪಿಟಿಐಗೆ ತಿಳಿಸಿದ್ದಾಗಿ ವಿಶೇಷ ವರದಿ ಮಾಡಿದೆ.

‘ಪಾಕಿಸ್ತಾನ ನೆಲದಿಂದ ಕಾರ್ಯಾಚರಿಸುತ್ತಿರುವ ಉಗ್ರಗಾಮಿ ಸಂಘಟನೆಗಳಿಗೆ ಆಶ್ರಯ ಒದಗಿಸುವ ಕೆಲಸ ಮಾಡಬಾರದು. ಅವರ ಗುರಿ ಇರುವುದು ಗೊಂದಲ ಸೃಷ್ಟಿ, ಹಿಂಸೆ ಮತ್ತು ಈ ಪ್ರದೇಶದಲ್ಲಿ ಭಯೋತ್ಪಾದನೆ ಸೃಷ್ಟಿ ಮಾತ್ರ’ ಎಂದು ಅಮೆರಿಕದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್‌ ಹೇಳಿದ್ದಾರೆ.

‘ಭಾರತ ಮತ್ತು ಅಮೆರಿಕದ ನಡುವೆ ಇರುವ ಭಯೋತ್ಪಾದನೆ ತಡೆ ಸಹಕಾರ ಮತ್ತು ಸಮನ್ವಯವನ್ನು ಈ ದಾಳಿಯು ಇನ್ನಷ್ಟು ಗಟ್ಟಿಗೊಳಿಸುತ್ತದೆ’ ಎಂದೂ ಅವರು ಹೇಳಿದ್ದಾರೆ.

ಉಗ್ರರಿಗೆ ಸುರಕ್ಷಿತ ತಾಣ ಒದಗಿಸುವ ಕೆಲಸವನ್ನು ಕೊನೆಗೊಳಿಸಬೇಕು ಎಂದು ಪಾಕಿಸ್ತಾನಕ್ಕೆ ಅಮೆರಿಕ ಅತ್ಯಂತ ಸ್ಪಷ್ಟವಾಗಿ ಹೇಳಿದೆ ಎಂದು ಅವರು ತಿಳಿಸಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago