Featured

ಸ್ವರಕ್ಷಣೆಗಾಗಿ ಹಾಗೂ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಸಂಪೂರ್ಣ ಬೆಂಬಲ : ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್ – Vishwanews24

ವಾಷಿಂಗ್ಟನ್‌: ‘ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ’ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್‌ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್‌ ಅವರಿಗೆ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವೋಂತಿಪೊರದಲ್ಲಿ ಜೈಷ್‌ ಉಗ್ರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಲು ಜಾನ್‌ ಬೋಲ್ಟನ್‌ ಅವರು ಅಜಿತ್‌ ದೋವಾಲ್‌ ಅವರಿ‌ಗೆ  ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಅಮೆರಿಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

‘ನಾವು ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ ಎಂದು ನಾನು ಇಂದು ಅಜಿತ್‌ ದೋವಾಲ್‌ ಅವರಿಗೆ ತಿಳಿಸಿದ್ದೇನೆ. ಈ ಕುರಿತು ಈ ಬೆಳಿಗ್ಗೆಯಿಂದ ಅವರ ಜತೆ ಎರಡು ಬಾರಿ ಮಾತನಾಡಿದ್ದೇನೆ ಮತ್ತು ಭಯೋತ್ಪಾದಕರ ದಾಳಿಗೆ ಅಮೆರಿಕ ಸಂತಾಪ ವ್ಯಕ್ತಪಡಿಸುತ್ತದೆ’ ಎಂದು ಪಿಟಿಐಗೆ ತಿಳಿಸಿದ್ದಾಗಿ ವಿಶೇಷ ವರದಿ ಮಾಡಿದೆ.

‘ಪಾಕಿಸ್ತಾನ ನೆಲದಿಂದ ಕಾರ್ಯಾಚರಿಸುತ್ತಿರುವ ಉಗ್ರಗಾಮಿ ಸಂಘಟನೆಗಳಿಗೆ ಆಶ್ರಯ ಒದಗಿಸುವ ಕೆಲಸ ಮಾಡಬಾರದು. ಅವರ ಗುರಿ ಇರುವುದು ಗೊಂದಲ ಸೃಷ್ಟಿ, ಹಿಂಸೆ ಮತ್ತು ಈ ಪ್ರದೇಶದಲ್ಲಿ ಭಯೋತ್ಪಾದನೆ ಸೃಷ್ಟಿ ಮಾತ್ರ’ ಎಂದು ಅಮೆರಿಕದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್‌ ಹೇಳಿದ್ದಾರೆ.

‘ಭಾರತ ಮತ್ತು ಅಮೆರಿಕದ ನಡುವೆ ಇರುವ ಭಯೋತ್ಪಾದನೆ ತಡೆ ಸಹಕಾರ ಮತ್ತು ಸಮನ್ವಯವನ್ನು ಈ ದಾಳಿಯು ಇನ್ನಷ್ಟು ಗಟ್ಟಿಗೊಳಿಸುತ್ತದೆ’ ಎಂದೂ ಅವರು ಹೇಳಿದ್ದಾರೆ.

ಉಗ್ರರಿಗೆ ಸುರಕ್ಷಿತ ತಾಣ ಒದಗಿಸುವ ಕೆಲಸವನ್ನು ಕೊನೆಗೊಳಿಸಬೇಕು ಎಂದು ಪಾಕಿಸ್ತಾನಕ್ಕೆ ಅಮೆರಿಕ ಅತ್ಯಂತ ಸ್ಪಷ್ಟವಾಗಿ ಹೇಳಿದೆ ಎಂದು ಅವರು ತಿಳಿಸಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago