Featured

ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ : ವಾರಾಣಸಿಯಲ್ಲಿ ಪ್ರಧಾನಿ ಮೋದಿ -Vishwanews24

ವಾರಾಣಸಿ: ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ.

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮರುಆಯ್ಕೆ ಬಯಸಿ ಶುಕ್ರವಾರ ನಾಮಪತ್ರ ಸಲ್ಲಿಸುವ ಮುನ್ನ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಗೆಲ್ಲಲಿ ಬಿಡಲಿ… ಒಟ್ಟಿನಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಬೇಕು. ಮೇ ತಿಂಗಳ ಬಿರುಬಿಸಿಲನ ನಡುವೆಯೂ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ಮತದಾನದ ಹಿಂದಿನ ಎಲ್ಲ ದಾಖಲೆಗಳನ್ನೂ ಪುಡಿಗಟ್ಟಬಹುದು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಡಬೇಕು. ಎಷ್ಟು ಪುರುಷರು ಮತದಾನ ಮಾಡುತ್ತಾರೋ ಅದಕ್ಕಿಂತ ಶೇ.5 ಹೆಚ್ಚು ಪ್ರಮಾಣದಲ್ಲಿ ಮಹಿಳೆಯರು ಮತದಾನ ಮಾಡುವಂತೆ ನೋಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚಿಸಿದರು.

100 ಜನ ಪುರುಷರು ಮತದಾನ ಮಾಡಿದರೆ, 105 ಮಹಿಳೆಯರು ಮತದಾನ ಮಾಡುವ ರೀತಿ ಎಚ್ಚರವಹಿಸಬೇಕು. ಕೇವಲ ವಾರಾಣಸಿಯನ್ನು ಗೆದ್ದರೆ ಸಾಲದು, ಪ್ರತಿಯೊಂದು ಬೂತ್​ ಅನ್ನೂ ನಾವು ಗೆಲ್ಲಬೇಕು. ಹೀಗೆ ಆಗದಿದ್ದರೆ ವಾರಾಣಸಿಯಲ್ಲಿನ ಗೆಲುವನ್ನು ಆಸ್ವಾದಿಸಲು ನನಗೆ ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದರು.

ಈ ಬಾರಿಯ ವಾರಾಣಸಿ ಚುನಾವಣೆ ಹೇಗಿರಬೇಕು ಎಂದರೆ, ನಮ್ಮ ದೇಶದ ರಾಜಕೀಯ ಪಂಡಿತರು ವಾರಾಣಸಿಯ ಐತಿಹಾಸಿಕ ಚುನಾವಣೆಯ ಕುರಿತು ಪುಸ್ತಕ ಬರೆಯುವಂತೆ ಇರಬೇಕು ಎಂದು ಹೇಳಿದರು.

ಗುರುವಾರ ನಡೆದ ತಮ್ಮ ರೋಡ್​ ಶೋಗೆ ವ್ಯಕ್ತವಾದ ಜನಬೆಂಬಲವನ್ನು ಗಮನಿಸಿದಾಗ ತಾವು ಈಗಾಗಲೆ ವಾರಾಣಸಿ ಕ್ಷೇತ್ರದಿಂದ ಗೆದ್ದಂತೆ ಭಾಸವಾಗುತ್ತಿದೆ. ವಾರಾಣಸಿಯ ಜನರು ರೋಡ್​ ಶೋಗೆ ವ್ಯಕ್ತಪಡಿಸಿದ ಬೆಂಬಲ ನೋಡಿದ ಬಳಿಕ ಮಾಧ್ಯಮಗಳು ಕೂಡ ಇನ್ನೇನು ಬಿಜೆಪಿ ಗೆದ್ದಾಗಿದೆ ಎಂದೇ ಹೇಳುತ್ತಿದ್ದು, ವಾರಾಣಸಿಯ ಚುನಾವಣೆ ಕುರಿತು ಹೆಚ್ಚಿನ ಕುತೂಹಲವನ್ನು ಕಳೆದುಕೊಂಡಿವೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.

ನಾನು ಪ್ರಧಾನಿ ಎಂಬ ಅಹಂನಲ್ಲಿ ಯಾರನ್ನೂ ಭೇಟಿಯಾಗಲು ನಿರಾಕರಿಸಲಿಲ್ಲ. ಪಕ್ಷದ ಒಬ್ಬನೇ ಒಬ್ಬ ಕಾರ್ಯಕರ್ತನನ್ನೂ ಭೇಟಿಯಾಗಲು ಒಲ್ಲೆಯೆನ್ನಲಿಲ್ಲ. ನನ್ನೊಳಗಿನ ಕಾರ್ಯಕರ್ತನನ್ನು ಜೀವಂತವಾಗುಳಿಸಿಕೊಂಡೆ. ಪ್ರಧಾನಿಯಾಗಿ, ಸಂಸದನಾಗಿ ಮತ್ತು ಕಾರ್ಯಕರ್ತನಾಗಿ ನನ್ನ ಕರ್ತವ್ಯಗಳನ್ನು ನಾನೆಂದೂ ಮರೆಯಲಿಲ್ಲ… ಎಂದು ಪ್ರಧಾನಿ ಹೇಳಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago