Featured

ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ : ವಾರಾಣಸಿಯಲ್ಲಿ ಪ್ರಧಾನಿ ಮೋದಿ -Vishwanews24

ವಾರಾಣಸಿ: ಸ್ವಾತಂತ್ರ್ಯಾನಂತರದಲ್ಲಿ ಇದೇ ಮೊದಲ ಬಾರಿಗೆ ದೇಶದ ಮೂಲೆಮೂಲೆಯಲ್ಲೂ ಆಡಳಿತ ಪರ ಅಲೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ.

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮರುಆಯ್ಕೆ ಬಯಸಿ ಶುಕ್ರವಾರ ನಾಮಪತ್ರ ಸಲ್ಲಿಸುವ ಮುನ್ನ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಗೆಲ್ಲಲಿ ಬಿಡಲಿ… ಒಟ್ಟಿನಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಬೇಕು. ಮೇ ತಿಂಗಳ ಬಿರುಬಿಸಿಲನ ನಡುವೆಯೂ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ಮತದಾನದ ಹಿಂದಿನ ಎಲ್ಲ ದಾಖಲೆಗಳನ್ನೂ ಪುಡಿಗಟ್ಟಬಹುದು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಡಬೇಕು. ಎಷ್ಟು ಪುರುಷರು ಮತದಾನ ಮಾಡುತ್ತಾರೋ ಅದಕ್ಕಿಂತ ಶೇ.5 ಹೆಚ್ಚು ಪ್ರಮಾಣದಲ್ಲಿ ಮಹಿಳೆಯರು ಮತದಾನ ಮಾಡುವಂತೆ ನೋಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಸೂಚಿಸಿದರು.

100 ಜನ ಪುರುಷರು ಮತದಾನ ಮಾಡಿದರೆ, 105 ಮಹಿಳೆಯರು ಮತದಾನ ಮಾಡುವ ರೀತಿ ಎಚ್ಚರವಹಿಸಬೇಕು. ಕೇವಲ ವಾರಾಣಸಿಯನ್ನು ಗೆದ್ದರೆ ಸಾಲದು, ಪ್ರತಿಯೊಂದು ಬೂತ್​ ಅನ್ನೂ ನಾವು ಗೆಲ್ಲಬೇಕು. ಹೀಗೆ ಆಗದಿದ್ದರೆ ವಾರಾಣಸಿಯಲ್ಲಿನ ಗೆಲುವನ್ನು ಆಸ್ವಾದಿಸಲು ನನಗೆ ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದರು.

ಈ ಬಾರಿಯ ವಾರಾಣಸಿ ಚುನಾವಣೆ ಹೇಗಿರಬೇಕು ಎಂದರೆ, ನಮ್ಮ ದೇಶದ ರಾಜಕೀಯ ಪಂಡಿತರು ವಾರಾಣಸಿಯ ಐತಿಹಾಸಿಕ ಚುನಾವಣೆಯ ಕುರಿತು ಪುಸ್ತಕ ಬರೆಯುವಂತೆ ಇರಬೇಕು ಎಂದು ಹೇಳಿದರು.

ಗುರುವಾರ ನಡೆದ ತಮ್ಮ ರೋಡ್​ ಶೋಗೆ ವ್ಯಕ್ತವಾದ ಜನಬೆಂಬಲವನ್ನು ಗಮನಿಸಿದಾಗ ತಾವು ಈಗಾಗಲೆ ವಾರಾಣಸಿ ಕ್ಷೇತ್ರದಿಂದ ಗೆದ್ದಂತೆ ಭಾಸವಾಗುತ್ತಿದೆ. ವಾರಾಣಸಿಯ ಜನರು ರೋಡ್​ ಶೋಗೆ ವ್ಯಕ್ತಪಡಿಸಿದ ಬೆಂಬಲ ನೋಡಿದ ಬಳಿಕ ಮಾಧ್ಯಮಗಳು ಕೂಡ ಇನ್ನೇನು ಬಿಜೆಪಿ ಗೆದ್ದಾಗಿದೆ ಎಂದೇ ಹೇಳುತ್ತಿದ್ದು, ವಾರಾಣಸಿಯ ಚುನಾವಣೆ ಕುರಿತು ಹೆಚ್ಚಿನ ಕುತೂಹಲವನ್ನು ಕಳೆದುಕೊಂಡಿವೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.

ನಾನು ಪ್ರಧಾನಿ ಎಂಬ ಅಹಂನಲ್ಲಿ ಯಾರನ್ನೂ ಭೇಟಿಯಾಗಲು ನಿರಾಕರಿಸಲಿಲ್ಲ. ಪಕ್ಷದ ಒಬ್ಬನೇ ಒಬ್ಬ ಕಾರ್ಯಕರ್ತನನ್ನೂ ಭೇಟಿಯಾಗಲು ಒಲ್ಲೆಯೆನ್ನಲಿಲ್ಲ. ನನ್ನೊಳಗಿನ ಕಾರ್ಯಕರ್ತನನ್ನು ಜೀವಂತವಾಗುಳಿಸಿಕೊಂಡೆ. ಪ್ರಧಾನಿಯಾಗಿ, ಸಂಸದನಾಗಿ ಮತ್ತು ಕಾರ್ಯಕರ್ತನಾಗಿ ನನ್ನ ಕರ್ತವ್ಯಗಳನ್ನು ನಾನೆಂದೂ ಮರೆಯಲಿಲ್ಲ… ಎಂದು ಪ್ರಧಾನಿ ಹೇಳಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago