ಲಾತೂರ್ :ಪಾಕಿಸ್ತಾನವನ್ನು ಸೃಷ್ಟಿಸಿದ್ದೇ ಕಾಂಗ್ರೆಸ್; ಈಗ ಈ ಕಾಂಗ್ರೆಸ್ ಪಾಕಿಸ್ತಾನದ ಭಾಷೆಯಲ್ಲೇ ಮಾತಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.
‘ಕಾಶ್ಮೀರ ಕುರಿತ ವಿಚಾರಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಮತ್ತು ಪಾಕಿಸ್ತಾನ ಒಂದೇ ಧ್ವನಿಯಿಂದ ಮಾತಾಡುತ್ತಿವೆ’ ಎಂದು ಪ್ರಧಾನಿ ಆರೋಪಿಸಿದರು. ಪಾಕಿಸ್ತಾನದ ವಿಮಾನವನ್ನು ನಮ್ಮ ವಾಯುಪಡೆ ಹೊಡೆದುರುಳಿಸಿರುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಇನ್ನೂ ಏನೇನು ಸಾಕ್ಷಿಗಳು ಬೇಕು?’ ಎಂದು ಪ್ರಧಾನಿ ಪ್ರಶ್ನಿಸಿದರು.
ಬಿಜೆಪಿ ಆಡಳಿತದಲ್ಲಿ ‘ನವ ಭಾರತ’ದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಭಯೋತ್ಪಾದಕರನ್ನು ಅವರ ಗುಹೆಗಳಿಗೇ ನುಗ್ಗಿ ಭಾರತ ನಾಶಪಡಿಸುತ್ತದೆ. ಇದು ನವ ಭಾರತದ ನೀತಿ. ಭಯೋತ್ಪಾದನೆಯ ಸಮೂಲ ನಾಶವೇ ನಮ್ಮ ಸಂಕಲ್ಪ’ ಎಂದು ಘೋಷಿಸಿದರು.
ಮೊದಲ ಬಾರಿ ಹಕ್ಕು ಚಲಾಯಿಸುವ ಮತದಾರರು ತಮ್ಮ ಮತಗಳನ್ನು ಪಾಕಿಸ್ತಾನದ ಬಾಲಾಕೋಟ್ ಮೇಲೆ ದಾಳಿ ಮಾಡಿದ ಯೋಧರಿಗೆ ಸಮರ್ಪಿಸಬೇಕು ಎಂದು ಕರೆ ನೀಡಿದರು.
‘ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕು ಎಂದು ಕೇಳುವ ಮಾನಸಿಕತೆಯನ್ನು ದಶಕಗಳ ಕಾಲ ಆಳಿದ ಪಕ್ಷ ಪೋಷಿಸಿಕೊಂಡು ಬಂದಿದೆ. ಅವರ ಹೃದಯದಲ್ಲಿದ್ದಿದ್ದು ಈಗ ಬಹಿರಂಗವಾಗಿದೆ’ ಎಂದು ಮೋದಿ ಟೀಕಿಸಿದರು.
‘ಪ್ರತ್ಯೇಕ ಪ್ರಧಾನಿ ಬೇಕು ಎನ್ನುವವರ ಬೆಂಬಲಕ್ಕೆ ಕಾಂಗ್ರೆಸ್ ಮತ್ತು ಎನ್ಸಿಪಿ ನಿಂತಿವೆ. ಕಾಂಗ್ರೆಸ್ ಅಂತೂ ದೇಶವಿರೋಧಿ ಪಕ್ಷ ಎಂಬುದು ಸಾಬೀತಾಗಿದೆ. ಅದರ ಜತೆಗೆ ಶರದ್ ಸಾಬ್ ಕೂಡ ನಿಂತಿದ್ದಾರಲ್ಲ…? ಇದು ನಿಮಗೆ ಶೋಭೆಯೆ ಶರದ್ ಸಾಬ್?’ ಎಂದು ಮೋದಿ ಪ್ರಶ್ನಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…