Featured

ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ನಾಯಕರು ಬುದ್ಧಿವಂತಿಕೆಯಿಂದ ವರ್ತಿಸುತ್ತಿದ್ದರೆ ಈ ಪಾಕಿಸ್ತಾನ ಸೃಷ್ಟಿಯಾಗುತ್ತಲೇ ಇರಲಿಲ್ಲ : ಪ್ರಧಾನಿ ಮೋದಿ

ಲಾತೂರ್ :ಪಾಕಿಸ್ತಾನವನ್ನು ಸೃಷ್ಟಿಸಿದ್ದೇ ಕಾಂಗ್ರೆಸ್; ಈಗ ಈ ಕಾಂಗ್ರೆಸ್ ಪಾಕಿಸ್ತಾನದ ಭಾಷೆಯಲ್ಲೇ ಮಾತಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

‘ಪಾಕಿಸ್ತಾನದ ರಚನೆಗೆ ಕಾಂಗ್ರೆಸ್ ಹೊಣೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ನಾಯಕರು ಬುದ್ಧಿವಂತಿಕೆಯಿಂದ ವರ್ತಿಸುತ್ತಿದ್ದರೆ ‘ಈ ಪಾಕಿಸ್ತಾನ’ ಸೃಷ್ಟಿಯಾಗುತ್ತಲೇ ಇರಲಿಲ್ಲ’ ಎಂದು ಮೋದಿ ಬೃಹತ್ ಜನಸಮೂಹದ ಮುಂದೆ ನುಡಿದರು.

‘ಕಾಶ್ಮೀರ ಕುರಿತ ವಿಚಾರಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಮತ್ತು ಪಾಕಿಸ್ತಾನ ಒಂದೇ ಧ್ವನಿಯಿಂದ ಮಾತಾಡುತ್ತಿವೆ’ ಎಂದು ಪ್ರಧಾನಿ ಆರೋಪಿಸಿದರು. ಪಾಕಿಸ್ತಾನದ ವಿಮಾನವನ್ನು ನಮ್ಮ ವಾಯುಪಡೆ ಹೊಡೆದುರುಳಿಸಿರುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಇನ್ನೂ ಏನೇನು ಸಾಕ್ಷಿಗಳು ಬೇಕು?’ ಎಂದು ಪ್ರಧಾನಿ ಪ್ರಶ್ನಿಸಿದರು.

ಬಿಜೆಪಿ ಆಡಳಿತದಲ್ಲಿ ‘ನವ ಭಾರತ’ದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಭಯೋತ್ಪಾದಕರನ್ನು ಅವರ ಗುಹೆಗಳಿಗೇ ನುಗ್ಗಿ ಭಾರತ ನಾಶಪಡಿಸುತ್ತದೆ. ಇದು ನವ ಭಾರತದ ನೀತಿ. ಭಯೋತ್ಪಾದನೆಯ ಸಮೂಲ ನಾಶವೇ ನಮ್ಮ ಸಂಕಲ್ಪ’ ಎಂದು ಘೋಷಿಸಿದರು.

ಮೊದಲ ಬಾರಿ ಹಕ್ಕು ಚಲಾಯಿಸುವ ಮತದಾರರು ತಮ್ಮ ಮತಗಳನ್ನು ಪಾಕಿಸ್ತಾನದ ಬಾಲಾಕೋಟ್ ಮೇಲೆ ದಾಳಿ ಮಾಡಿದ ಯೋಧರಿಗೆ ಸಮರ್ಪಿಸಬೇಕು ಎಂದು ಕರೆ ನೀಡಿದರು.

‘ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕು ಎಂದು ಕೇಳುವ ಮಾನಸಿಕತೆಯನ್ನು ದಶಕಗಳ ಕಾಲ ಆಳಿದ ಪಕ್ಷ ಪೋಷಿಸಿಕೊಂಡು ಬಂದಿದೆ. ಅವರ ಹೃದಯದಲ್ಲಿದ್ದಿದ್ದು ಈಗ ಬಹಿರಂಗವಾಗಿದೆ’ ಎಂದು ಮೋದಿ ಟೀಕಿಸಿದರು.

‘ಪ್ರತ್ಯೇಕ ಪ್ರಧಾನಿ ಬೇಕು ಎನ್ನುವವರ ಬೆಂಬಲಕ್ಕೆ ಕಾಂಗ್ರೆಸ್ ಮತ್ತು ಎನ್‌ಸಿಪಿ ನಿಂತಿವೆ. ಕಾಂಗ್ರೆಸ್ ಅಂತೂ ದೇಶವಿರೋಧಿ ಪಕ್ಷ ಎಂಬುದು ಸಾಬೀತಾಗಿದೆ. ಅದರ ಜತೆಗೆ ಶರದ್ ಸಾಬ್ ಕೂಡ ನಿಂತಿದ್ದಾರಲ್ಲ…? ಇದು ನಿಮಗೆ ಶೋಭೆಯೆ ಶರದ್ ಸಾಬ್?’ ಎಂದು ಮೋದಿ ಪ್ರಶ್ನಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago