ಲಾತೂರ್ :ಪಾಕಿಸ್ತಾನವನ್ನು ಸೃಷ್ಟಿಸಿದ್ದೇ ಕಾಂಗ್ರೆಸ್; ಈಗ ಈ ಕಾಂಗ್ರೆಸ್ ಪಾಕಿಸ್ತಾನದ ಭಾಷೆಯಲ್ಲೇ ಮಾತಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.
‘ಕಾಶ್ಮೀರ ಕುರಿತ ವಿಚಾರಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಮತ್ತು ಪಾಕಿಸ್ತಾನ ಒಂದೇ ಧ್ವನಿಯಿಂದ ಮಾತಾಡುತ್ತಿವೆ’ ಎಂದು ಪ್ರಧಾನಿ ಆರೋಪಿಸಿದರು. ಪಾಕಿಸ್ತಾನದ ವಿಮಾನವನ್ನು ನಮ್ಮ ವಾಯುಪಡೆ ಹೊಡೆದುರುಳಿಸಿರುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಇನ್ನೂ ಏನೇನು ಸಾಕ್ಷಿಗಳು ಬೇಕು?’ ಎಂದು ಪ್ರಧಾನಿ ಪ್ರಶ್ನಿಸಿದರು.
ಬಿಜೆಪಿ ಆಡಳಿತದಲ್ಲಿ ‘ನವ ಭಾರತ’ದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಭಯೋತ್ಪಾದಕರನ್ನು ಅವರ ಗುಹೆಗಳಿಗೇ ನುಗ್ಗಿ ಭಾರತ ನಾಶಪಡಿಸುತ್ತದೆ. ಇದು ನವ ಭಾರತದ ನೀತಿ. ಭಯೋತ್ಪಾದನೆಯ ಸಮೂಲ ನಾಶವೇ ನಮ್ಮ ಸಂಕಲ್ಪ’ ಎಂದು ಘೋಷಿಸಿದರು.
ಮೊದಲ ಬಾರಿ ಹಕ್ಕು ಚಲಾಯಿಸುವ ಮತದಾರರು ತಮ್ಮ ಮತಗಳನ್ನು ಪಾಕಿಸ್ತಾನದ ಬಾಲಾಕೋಟ್ ಮೇಲೆ ದಾಳಿ ಮಾಡಿದ ಯೋಧರಿಗೆ ಸಮರ್ಪಿಸಬೇಕು ಎಂದು ಕರೆ ನೀಡಿದರು.
‘ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನ ಮಂತ್ರಿ ಬೇಕು ಎಂದು ಕೇಳುವ ಮಾನಸಿಕತೆಯನ್ನು ದಶಕಗಳ ಕಾಲ ಆಳಿದ ಪಕ್ಷ ಪೋಷಿಸಿಕೊಂಡು ಬಂದಿದೆ. ಅವರ ಹೃದಯದಲ್ಲಿದ್ದಿದ್ದು ಈಗ ಬಹಿರಂಗವಾಗಿದೆ’ ಎಂದು ಮೋದಿ ಟೀಕಿಸಿದರು.
‘ಪ್ರತ್ಯೇಕ ಪ್ರಧಾನಿ ಬೇಕು ಎನ್ನುವವರ ಬೆಂಬಲಕ್ಕೆ ಕಾಂಗ್ರೆಸ್ ಮತ್ತು ಎನ್ಸಿಪಿ ನಿಂತಿವೆ. ಕಾಂಗ್ರೆಸ್ ಅಂತೂ ದೇಶವಿರೋಧಿ ಪಕ್ಷ ಎಂಬುದು ಸಾಬೀತಾಗಿದೆ. ಅದರ ಜತೆಗೆ ಶರದ್ ಸಾಬ್ ಕೂಡ ನಿಂತಿದ್ದಾರಲ್ಲ…? ಇದು ನಿಮಗೆ ಶೋಭೆಯೆ ಶರದ್ ಸಾಬ್?’ ಎಂದು ಮೋದಿ ಪ್ರಶ್ನಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…