Featured

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಗಾಂಧಿವಾದಿ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ -Vishwanews24

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಗಾಂಧಿವಾದಿ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ -Vishwanews24

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಗಾಂಧಿವಾದಿಯಾದ ಸದಾಶಿವರಾವ ಬಾಪುಸಾಹೇಬ ಭೋಸಲೆ (101) ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾಗಿದ್ದಾರೆ.

ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆತಯಿಂದ ಪ್ರೇರೇಪಿತರಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದ ಸದಾಶಿವರಾವ ಭೋಸಲೆ ಅವರು, 1946 ರಲ್ಲಿ ಬ್ರಿಟಿಷ್ ಸರ್ಕಾರ ಚುನಾವಣೆ ನಡೆಸಿದ್ದ ಸಂದರ್ಭ ಹಾಗೂ 1952 ರಲ್ಲಿ ಶಾಸಕರಾಗಿದ್ದರು.

ಉಡುಪಿ : ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬೆಡ್ ಕೊರತೆ: ಬರುವ ಮುನ್ನ ಕರೆ ಮಾಡಿ -Vishwanews24

ಬಳಿಕ ಸರ್ಕಾರವು ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಸಮಾಧಾನಗೊಂಡು 1954ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಭೂ ದಾನ ಚಳವಳಿಯಲ್ಲಿ ಭಾಗಿಯಾದರು. ನೂರು ಎಕರೆವರೆಗೆ ಜಮೀನನ್ನು ಗ್ರಾಮದ ಜನರಿಗೆ ದಾನವಾಗಿ ನೀಡಿದರು.

ಕಟ್ಟ ಗಾಂಧಿವಾದಿಯಾಗಿದ್ದ ಅವರು, ತಮ್ಮ ಜೀವನದಲ್ಲೇ ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಿದ್ದರು. ತಮಗೆ ಹಾಗೂ ಪತ್ನಿಗೆ ಬೇಕಾದ ಖಾದಿ ಬಟ್ಟೆಗಳನ್ನು ಚರಕದಲ್ಲಿ ತಾವಾಗಿಯೇ ಸಿದ್ಧಪಡಿಸಿಕೊಳ್ಳುತ್ತಿದ್ದರು. ಸರಳ ಜೀವನ ನಡೆಸುತ್ತಿದ್ದರು. ಕಡೋಲಿ ಸಮೀಪದ ದೇವಗಿರಿಯಲ್ಲಿ ಕಟ್ಟಡವೊಂಡನ್ನು ಕಟ್ಟಿಸಿ ಅದಕ್ಕೆ ಗಾಂಧಿ ಘರ್‌ ಎಂದು ಹೆಸರಿಟ್ಟಿದ್ದ ಅವರು, ಅದರಲ್ಲಿ ನೂಲು ತೆಗೆಯುವುದು, ಮಕ್ಕಳಿಗೆ ಅಕ್ಷರಾಭ್ಯಾಸ, ಮಹಿಳೆಯರಿಗೆ ಸ್ವ ಉದ್ಯೋಗ ತರಬೇತಿ, ಕೃಷಿ, ಸ್ವಚ್ಛತೆ ಜಾಗೃತಿ ಮತ್ತು ಚಿಂತನ–ಮಂಥನ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

ನನ್ನಲ್ಲಿ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ಇದೆ : ಯತ್ನಾಳ್ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago