Featured

ಹಂಪಿ ಉತ್ಸವಕ್ಕೆ ಆರ್ಥಿಕ ನೆರವು ನಾನು ನೀಡುತ್ತೇನೆ, ಉತ್ಸವ ಅದ್ದೂರಿಯಾಗಿ ನಡೆಯಲಿ, : ಜನಾರ್ಧನ ರೆಡ್ಡಿ

ಬೆಂಗಳೂರು: ವಿಶ್ವ ಪ್ರಖ್ಯಾತ ಹಂಪಿ ಉತ್ಸವ ಯಾವುದೇ ಕಾರಣಕ್ಕೂ ನಿಲ್ಲುವುದು ಬೇಡ. ಉತ್ಸವಕ್ಕೆ ಅಗತ್ಯವಾದ ಆರ್ಥಿಕ ಹಾಗೂ ಇತರ ನೆರವನ್ನು ತಾವೇ ನೀಡುವುದಾಗಿ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಹಂಪಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಇದನ್ನು ಅದ್ದೂರಿಯಾಗೇ ಆಚರಿಸೋಣ, ಆರ್ಥಿಕ ನೆರವು ಸೇರಿ ಯಾವುದೇ ಸಹಕಾರ ನೀಡಲು ನಾನು ಸಿದ್ದನಿದ್ದೇನೆ ಎಂದು ಅವರು ಘೋಷಿಸಿದ್ದಾರೆ.

ನವೆಂಬರ್ 3 ರಂದು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ? ಬಿಜೆಪಿ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಬಿನ್ನವಿಸಿಕೊಂಡರೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ? ಉಪ ಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ? ಎಂದು ಜನಾರ್ಧನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಫೇಸ್‌ಬುಕ್‌ ಪೋಸ್ಟ್ ನಲ್ಲಿ ಜನಾರ್ಧನ ರೆಡ್ಡಿ ಈ ಸಂಬಂಧ ಸುದೀರ್ಘ ಬರಹವನ್ನೇ ಪ್ರಕಟಿಸಿದ್ದಾರೆ.”ಹಂಪಿ ಉತ್ಸವ ಮೂರು ದಿನಗಳ ಕಾಲ ಅದ್ದೂರಿಯಾಗೇ ನಡೆಯಬೇಕು, ನಿಮಗೆ ಕೃತಜ್ಞತಾ ಸಮಾವೇಶ ಮಾಡೋಕೆ ಕೋಟಿ ಕೋಟಿ ಹಣ ಇದೆ, ಉಪ ಚುನಾವಣೆ ಗೆಲ್ಲೋಕೆ ಹಣವನ್ನು ನೀರಿನಂತೆ ಖರ್ಚು ಮಾಡಿದ್ದೀರಿ.ಆದರೆ ಹಂಪಿ ಉತ್ಸವ ವಿಚಾರದಲ್ಲಿ ಮಾತ್ರ ನಿಮಗೆ ಬರದ ಸಮಸ್ಯೆ ಕಾಡುತ್ತಿದೆ. ಹಂಪಿ ಉತ್ಸವ ನಡೆಸೋಕೆ ನಿಮ್ಮ ಕೈಲಾಗದೆ ಹೋದರೆ ಹೇಳಿ, ನಾನೇ ದುಡ್ಡು ಕೊಡುತ್ತೇನೆ, ಅದ್ದೂರಿಯಾಗಿ ಆಚರಿಸಿ” ಎಂದು ಗುಡುಗಿದ್ದಾರೆ.
ಅದ್ದೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ” ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.
vishwanews24
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago