Featured

ಹಂಪಿ ಉತ್ಸವಕ್ಕೆ ಆರ್ಥಿಕ ನೆರವು ನಾನು ನೀಡುತ್ತೇನೆ, ಉತ್ಸವ ಅದ್ದೂರಿಯಾಗಿ ನಡೆಯಲಿ, : ಜನಾರ್ಧನ ರೆಡ್ಡಿ

ಬೆಂಗಳೂರು: ವಿಶ್ವ ಪ್ರಖ್ಯಾತ ಹಂಪಿ ಉತ್ಸವ ಯಾವುದೇ ಕಾರಣಕ್ಕೂ ನಿಲ್ಲುವುದು ಬೇಡ. ಉತ್ಸವಕ್ಕೆ ಅಗತ್ಯವಾದ ಆರ್ಥಿಕ ಹಾಗೂ ಇತರ ನೆರವನ್ನು ತಾವೇ ನೀಡುವುದಾಗಿ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಹಂಪಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಇದನ್ನು ಅದ್ದೂರಿಯಾಗೇ ಆಚರಿಸೋಣ, ಆರ್ಥಿಕ ನೆರವು ಸೇರಿ ಯಾವುದೇ ಸಹಕಾರ ನೀಡಲು ನಾನು ಸಿದ್ದನಿದ್ದೇನೆ ಎಂದು ಅವರು ಘೋಷಿಸಿದ್ದಾರೆ.

ನವೆಂಬರ್ 3 ರಂದು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ? ಬಿಜೆಪಿ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಬಿನ್ನವಿಸಿಕೊಂಡರೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ? ಉಪ ಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ? ಎಂದು ಜನಾರ್ಧನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಫೇಸ್‌ಬುಕ್‌ ಪೋಸ್ಟ್ ನಲ್ಲಿ ಜನಾರ್ಧನ ರೆಡ್ಡಿ ಈ ಸಂಬಂಧ ಸುದೀರ್ಘ ಬರಹವನ್ನೇ ಪ್ರಕಟಿಸಿದ್ದಾರೆ.”ಹಂಪಿ ಉತ್ಸವ ಮೂರು ದಿನಗಳ ಕಾಲ ಅದ್ದೂರಿಯಾಗೇ ನಡೆಯಬೇಕು, ನಿಮಗೆ ಕೃತಜ್ಞತಾ ಸಮಾವೇಶ ಮಾಡೋಕೆ ಕೋಟಿ ಕೋಟಿ ಹಣ ಇದೆ, ಉಪ ಚುನಾವಣೆ ಗೆಲ್ಲೋಕೆ ಹಣವನ್ನು ನೀರಿನಂತೆ ಖರ್ಚು ಮಾಡಿದ್ದೀರಿ.ಆದರೆ ಹಂಪಿ ಉತ್ಸವ ವಿಚಾರದಲ್ಲಿ ಮಾತ್ರ ನಿಮಗೆ ಬರದ ಸಮಸ್ಯೆ ಕಾಡುತ್ತಿದೆ. ಹಂಪಿ ಉತ್ಸವ ನಡೆಸೋಕೆ ನಿಮ್ಮ ಕೈಲಾಗದೆ ಹೋದರೆ ಹೇಳಿ, ನಾನೇ ದುಡ್ಡು ಕೊಡುತ್ತೇನೆ, ಅದ್ದೂರಿಯಾಗಿ ಆಚರಿಸಿ” ಎಂದು ಗುಡುಗಿದ್ದಾರೆ.
ಅದ್ದೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ” ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.
vishwanews24
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago