ಬೆಂಗಳೂರು: ವಿಶ್ವ ಪ್ರಖ್ಯಾತ ಹಂಪಿ ಉತ್ಸವ ಯಾವುದೇ ಕಾರಣಕ್ಕೂ ನಿಲ್ಲುವುದು ಬೇಡ. ಉತ್ಸವಕ್ಕೆ ಅಗತ್ಯವಾದ ಆರ್ಥಿಕ ಹಾಗೂ ಇತರ ನೆರವನ್ನು ತಾವೇ ನೀಡುವುದಾಗಿ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಹಂಪಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಇದನ್ನು ಅದ್ದೂರಿಯಾಗೇ ಆಚರಿಸೋಣ, ಆರ್ಥಿಕ ನೆರವು ಸೇರಿ ಯಾವುದೇ ಸಹಕಾರ ನೀಡಲು ನಾನು ಸಿದ್ದನಿದ್ದೇನೆ ಎಂದು ಅವರು ಘೋಷಿಸಿದ್ದಾರೆ.
ನವೆಂಬರ್ 3 ರಂದು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ? ಬಿಜೆಪಿ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಬಿನ್ನವಿಸಿಕೊಂಡರೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ? ಉಪ ಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ? ಎಂದು ಜನಾರ್ಧನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…