Featured

ಹಂಪಿ ಉತ್ಸವಕ್ಕೆ ಆರ್ಥಿಕ ನೆರವು ನಾನು ನೀಡುತ್ತೇನೆ, ಉತ್ಸವ ಅದ್ದೂರಿಯಾಗಿ ನಡೆಯಲಿ, : ಜನಾರ್ಧನ ರೆಡ್ಡಿ

ಬೆಂಗಳೂರು: ವಿಶ್ವ ಪ್ರಖ್ಯಾತ ಹಂಪಿ ಉತ್ಸವ ಯಾವುದೇ ಕಾರಣಕ್ಕೂ ನಿಲ್ಲುವುದು ಬೇಡ. ಉತ್ಸವಕ್ಕೆ ಅಗತ್ಯವಾದ ಆರ್ಥಿಕ ಹಾಗೂ ಇತರ ನೆರವನ್ನು ತಾವೇ ನೀಡುವುದಾಗಿ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಹಂಪಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಇದನ್ನು ಅದ್ದೂರಿಯಾಗೇ ಆಚರಿಸೋಣ, ಆರ್ಥಿಕ ನೆರವು ಸೇರಿ ಯಾವುದೇ ಸಹಕಾರ ನೀಡಲು ನಾನು ಸಿದ್ದನಿದ್ದೇನೆ ಎಂದು ಅವರು ಘೋಷಿಸಿದ್ದಾರೆ.

ನವೆಂಬರ್ 3 ರಂದು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ? ಬಿಜೆಪಿ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಬಿನ್ನವಿಸಿಕೊಂಡರೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ? ಉಪ ಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ? ಎಂದು ಜನಾರ್ಧನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಫೇಸ್‌ಬುಕ್‌ ಪೋಸ್ಟ್ ನಲ್ಲಿ ಜನಾರ್ಧನ ರೆಡ್ಡಿ ಈ ಸಂಬಂಧ ಸುದೀರ್ಘ ಬರಹವನ್ನೇ ಪ್ರಕಟಿಸಿದ್ದಾರೆ.”ಹಂಪಿ ಉತ್ಸವ ಮೂರು ದಿನಗಳ ಕಾಲ ಅದ್ದೂರಿಯಾಗೇ ನಡೆಯಬೇಕು, ನಿಮಗೆ ಕೃತಜ್ಞತಾ ಸಮಾವೇಶ ಮಾಡೋಕೆ ಕೋಟಿ ಕೋಟಿ ಹಣ ಇದೆ, ಉಪ ಚುನಾವಣೆ ಗೆಲ್ಲೋಕೆ ಹಣವನ್ನು ನೀರಿನಂತೆ ಖರ್ಚು ಮಾಡಿದ್ದೀರಿ.ಆದರೆ ಹಂಪಿ ಉತ್ಸವ ವಿಚಾರದಲ್ಲಿ ಮಾತ್ರ ನಿಮಗೆ ಬರದ ಸಮಸ್ಯೆ ಕಾಡುತ್ತಿದೆ. ಹಂಪಿ ಉತ್ಸವ ನಡೆಸೋಕೆ ನಿಮ್ಮ ಕೈಲಾಗದೆ ಹೋದರೆ ಹೇಳಿ, ನಾನೇ ದುಡ್ಡು ಕೊಡುತ್ತೇನೆ, ಅದ್ದೂರಿಯಾಗಿ ಆಚರಿಸಿ” ಎಂದು ಗುಡುಗಿದ್ದಾರೆ.
ಅದ್ದೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ” ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ.
vishwanews24
Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago