ಹಕ್ಕಿ ಜ್ವರದ ಬಗ್ಗೆ ಜಾಗೃತಿ ವಹಿಸಿ : ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸಲಹೆ -Vishwanews24

Featured, ರಾಷ್ಟ್ರ ನ್ಯೂಸ್

ಹಕ್ಕಿ ಜ್ವರದ ಬಗ್ಗೆ ಜಾಗೃತಿ ವಹಿಸಿ : ಎಲ್ಲಾ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸಲಹೆ –Vishwanews24

ನವದೆಹಲಿ: ಕೋವಿಡ್​​ ಅಬ್ಬರದ ಬೆನ್ನಲ್ಲೇ ದೇಶಕ್ಕೆ ಹಕ್ಕಿಜ್ವರ ಕಾಲಿಟ್ಟಿದೆ. ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಹಾಗು ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಕೊರೊನಾ ಲಸಿಕೆ ಸಂಬಂಧ ಸಿಎಂಗಳ ಜತೆ ಸಂವಾದ ನಡೆಸಿದ ಮೋದಿ, ಹಕ್ಕಿ ಜ್ವರದ ಬಗ್ಗೆಯೂ ಜಾಗೃತಿ ವಹಿಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಕೋವಿಡ್​ನಿಂದ ತತ್ತರಿಸಿರುವ ರಾಜ್ಯಗಳಲ್ಲಿ ಹಕ್ಕಿಜ್ವರವೂ ವ್ಯಾಪಕವಾಗಿ ಹರಡುತ್ತಿದೆ. ಈ ರೋಗವನ್ನು ನಿಯಂತ್ರಿಸಲು ಕೋಳಿ ಸಾಕಾಣಿಕೆ ಕೇಂದ್ರ, ಮೃಗಾಲಯ ಹಾಗೂ ಜಲಮೂಲಗಳ ಮೇಲೆ ನಿಗಾವಹಿಸುವಂತೆ ಮುಖ್ಯಮಂತ್ರಿಗಳಿಗೆ ನಮೋ ಸಲಹೆ ನೀಡಿದ್ದಾರೆ.

ಹಕ್ಕಿಜ್ವರ ದೃಢಪಟ್ಟಿರುವ ಬಹುತೇಕ ರಾಜ್ಯಗಳಲ್ಲಿ ಕೋಳಿ ಆಮದನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಉತ್ತರಾಖಂಡದಲ್ಲಿ ಸಂಪೂರ್ಣ ಎಚ್ಚರಿಕೆ ವಹಿಸುವಂತೆ ಮುಖ್ಯ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿಯೂ ರೋಗ ಹರಡದಂತೆ ಹಲವು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೂ ಹಕ್ಕಿಜ್ವರ ಪತ್ತೆಯಾಗಿಲ್ಲ. ಜನತೆ ಭಯ ಪಡುವುದು ಬೇಡ ಅಂತಾ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

http://ಬಿಜೆಪಿ ನನ್ನ ಬಗ್ಗೆ ಭಯಭೀತವಾಗಿದೆ, ಯಾಕೆಂದರೆ ನನ್ನನ್ನು ಖರೀದಿಸಲು ಸಾಧ್ಯವಿಲ್ಲ : ಮಮತಾ ಬ್ಯಾನರ್ಜಿ -Vishwanews24