ನವದೆಹಲಿ: ಕೋವಿಡ್ ಅಬ್ಬರದ ಬೆನ್ನಲ್ಲೇ ದೇಶಕ್ಕೆ ಹಕ್ಕಿಜ್ವರ ಕಾಲಿಟ್ಟಿದೆ. ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಹಾಗು ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಕೊರೊನಾ ಲಸಿಕೆ ಸಂಬಂಧ ಸಿಎಂಗಳ ಜತೆ ಸಂವಾದ ನಡೆಸಿದ ಮೋದಿ, ಹಕ್ಕಿ ಜ್ವರದ ಬಗ್ಗೆಯೂ ಜಾಗೃತಿ ವಹಿಸುವಂತೆ ಸೂಚಿಸಿದ್ದಾರೆ.
ಈಗಾಗಲೇ ಕೋವಿಡ್ನಿಂದ ತತ್ತರಿಸಿರುವ ರಾಜ್ಯಗಳಲ್ಲಿ ಹಕ್ಕಿಜ್ವರವೂ ವ್ಯಾಪಕವಾಗಿ ಹರಡುತ್ತಿದೆ. ಈ ರೋಗವನ್ನು ನಿಯಂತ್ರಿಸಲು ಕೋಳಿ ಸಾಕಾಣಿಕೆ ಕೇಂದ್ರ, ಮೃಗಾಲಯ ಹಾಗೂ ಜಲಮೂಲಗಳ ಮೇಲೆ ನಿಗಾವಹಿಸುವಂತೆ ಮುಖ್ಯಮಂತ್ರಿಗಳಿಗೆ ನಮೋ ಸಲಹೆ ನೀಡಿದ್ದಾರೆ.
ಹಕ್ಕಿಜ್ವರ ದೃಢಪಟ್ಟಿರುವ ಬಹುತೇಕ ರಾಜ್ಯಗಳಲ್ಲಿ ಕೋಳಿ ಆಮದನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಉತ್ತರಾಖಂಡದಲ್ಲಿ ಸಂಪೂರ್ಣ ಎಚ್ಚರಿಕೆ ವಹಿಸುವಂತೆ ಮುಖ್ಯ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕದಲ್ಲಿಯೂ ರೋಗ ಹರಡದಂತೆ ಹಲವು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೂ ಹಕ್ಕಿಜ್ವರ ಪತ್ತೆಯಾಗಿಲ್ಲ. ಜನತೆ ಭಯ ಪಡುವುದು ಬೇಡ ಅಂತಾ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…