Featured

ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ ??: ಡಿ.ಕೆ. ಶಿ -Vishwanews24

ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ ??: ಡಿ.ಕೆ. ಶಿ -Vishwanews24

ಬೆಂಗಳೂರು : ‘ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೋನಾ ಸೋಂಕು ಹರಡುವುದಿಲ್ಲವೇ? ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು ”ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕರ್ಫ್ಯು ಮಾಡುವುದೇಕೆ? ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾ? ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ? ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ? ಹಗಲು ವೇಳೆ ಹರಡುವುದಿಲ್ಲವೇ?’ ಎಂದು ಪ್ರಶ್ನಿಸಿದರು.

‘ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೋನಾ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ‘ನೀವು ಕೊರೋನಾ ನಿಯಂತ್ರಣ ಎಲ್ಲಿ ಮಾಡಿದ್ದೀರಿ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ವಿಚಾರವಾಗಿ ಯಾರನ್ನಾದರೂ ಕರೆದು ಮಾತನಾಡಿದ್ದಾರಾ? ಯಾರದಾದರೂ ಸಲಹೆ ಪಡೆದಿದ್ದಾರಾ?’ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

17 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

18 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

18 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

19 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

20 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

20 hours ago