Featured

ಹಜ್‌ ಯಾತ್ರೆ : ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿ : ಯು.ಟಿ. ಖಾದರ್‌ -Vishwanews24

ಮಂಗಳೂರು: ಹಜ್‌ ಯಾತ್ರೆ ಮಾಡುವ ನೀವು ಅದೃಷ್ಟಶಾಲಿಗಳಾಗಿದ್ದು, ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ (ದುವಾ)ಮಾಡಿ ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಕರ್ನಾಟಕ ರಾಜ್ಯ ಹಜ್‌ ಸಮಿತಿ ಅಶ್ರಯದಲ್ಲಿ ಹಜ್‌ ಕ್ಯಾಂಪ್‌ ನಿರ್ವಹಣಾ ಸಮಿತಿ ಮಂಗಳೂರಿನ ಸಹಯೋಗದೊಂದಿಗೆ ಬಜಪೆ ಅನ್ಸಾರ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ಹಜ್‌ ವಿಮಾನ ಯಾತ್ರೆ-2019ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪವಿತ್ರ ಹಜ್‌ ಯಾತ್ರೆ ಮಾಡಬೇಕೆಂಬುದು ಪ್ರತಿಯೊಬ್ಬ ಮುಸ್ಲಿಂ ವ್ಯಕ್ತಿಯ ಕನಸಾಗಿರುತ್ತದೆ. ಆದರೆ ಎಲ್ಲರಿಂದ ಇದು ಸಾಧ್ಯವಿಲ್ಲ. ಅದಕ್ಕೆ ಅಲ್ಲಾಹನ ಕೃಪೆ ಬೇಕು ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಹಜ್‌ ಘರ್‌ ನಿರ್ಮಾಣಕ್ಕೆ ಈಗಾಗಲೇ 70 ಸೆಂಟ್ಸು ಜಾಗ ನಿಗದಿಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಅನುದಾನ ನೀಡಲು ಮುಂದೆ ಬಂದಿದ್ದು ಸದ್ಯದಲ್ಲೇಶಿಲಾನ್ಯಾಸ ನಡೆಯಲಿದೆ ಎಂದರು.

ಸಚಿವ ಜಮೀರ್‌ ಆಹ್ಮದ್‌ ಖಾನ್‌ಅವರು ಜಿಲ್ಲೆಯಿಂದ 11 ಉಲೇಮಾಗಳಿಗೆ ಹಾಗೂ ರಾಜ್ಯದಿಂದ 100ಕ್ಕಿಂತ ಹೆಚ್ಚು ಉಲೇಮಾಗಳಿಗೆ ಪವಿತ್ರ ಹಜ್‌ಯಾತ್ರೆ ಕೈಗೊಳ್ಳಲು ಸಹಾಯ ಮಾಡಲಿದ್ದಾರೆ ಎಂದು ಖಾದರ್‌ ತಿಳಿಸಿದರು.

ಮಂಗಳೂರು ಮೂಲಕ ಈ ಬಾರಿ ಒಟ್ಟು 747 ಮಂದಿ ಹಜ್‌ ಯಾತ್ರೆ ಕೈಕೊಳ್ಳಲಿದ್ದಾರೆ. ಇದರಲ್ಲಿ ದ.ಕ. ಜಿಲ್ಲೆಯ 610, ಉಡುಪಿ ಜಿಲ್ಲೆಯ 72, ಕೊಡಗಿನ 39, ಹಾಸನದ 20, ಚಿಕ್ಕಮಗಳೂರಿನ 6 ಮಂದಿ ಇದ್ದಾರೆ. ರಾಜ್ಯ ಮಟ್ಟದಲ್ಲಿ ಒಟ್ಟು 14 ಸಾವಿರ ಹಜ್‌ ಯಾತ್ರಾರ್ಥಿಗಳಿಂದ ಅರ್ಜಿಗಳು ಬಂದಿದ್ದವು. ಈ ಬಾರಿ 8,739 ಮಂದಿಗೆ ಅವಕಾಶ ಲಭಿಸಿದೆ. ಕಳೆದ ಬಾರಿ 6,300 ಮಂದಿಗೆ ಮಾತ್ರ ಅವಕಾಶ ಇತ್ತು ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಎ. ಮೊದಿನ್‌ಬಾವಾ, ಕೆ.ಎಸ್‌. ಮಹಮ್ಮದ್‌ ಮಸೂದ್‌, ಮುಖಂಡರಾದ ಮಹಮ್ಮದ್‌ ಮೋನು, ಜಿಲ್ಲಾ ವಕ್ಫ್ ಯು.ಕೆ. ಮೋನು ಕಣಚೂರು, ಬಿ.ಎಂ. ಝಕರಿಯಾ, ವೈ. ಮಹಮ್ಮದ್‌ ಕುಂಞಿ, ಬಿ.ಎಂ. ಮುಮ್ತಾಝ್ ಅಲಿ, ಎಸ್‌.ಎಂ. ರಶೀದ್‌ ಹಾಜಿ, ಹನೀಫ್‌ ಹಾಜಿ ಕೊಳತ್ತಮಜಲು, ಎಂ.ಎಸ್‌. ಕರೀಂ, ಕೆ.ಕೆ. ಸಾಹುಲ್ ಹಮೀದ್‌, ಹೈದರ್‌ ಪರ್ತಿಪಾಡಿ, ಅಬ್ದುಲ್ ರಶೀದ್‌, ಅಶ್ರಫ್‌, ಬಶೀರ್‌, ಮಹಮ್ಮದ್‌ ಕುಂಜತ್ತಬೆೈಲು, ಬಶೀರ್‌ ಬೆೈಕಂಪಾಡಿ, ಸಿರಾಜ್‌, ಮಹಮದ್‌ ಶರೀಫ್‌, ಹನೀಫ್‌ ಮಹಮದ್‌ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago