Featured

ಹಜ್‌ ಯಾತ್ರೆ : ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿ : ಯು.ಟಿ. ಖಾದರ್‌ -Vishwanews24

ಮಂಗಳೂರು: ಹಜ್‌ ಯಾತ್ರೆ ಮಾಡುವ ನೀವು ಅದೃಷ್ಟಶಾಲಿಗಳಾಗಿದ್ದು, ಸಮಸ್ತ ನಾಡಿನ ಪ್ರತಿನಿಧಿಗಳಾಗಿ ದೇಶದ ಒಳಿತಿಗಾಗಿ ಪ್ರಾರ್ಥನೆ (ದುವಾ)ಮಾಡಿ ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು.

ಕರ್ನಾಟಕ ರಾಜ್ಯ ಹಜ್‌ ಸಮಿತಿ ಅಶ್ರಯದಲ್ಲಿ ಹಜ್‌ ಕ್ಯಾಂಪ್‌ ನಿರ್ವಹಣಾ ಸಮಿತಿ ಮಂಗಳೂರಿನ ಸಹಯೋಗದೊಂದಿಗೆ ಬಜಪೆ ಅನ್ಸಾರ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ಹಜ್‌ ವಿಮಾನ ಯಾತ್ರೆ-2019ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪವಿತ್ರ ಹಜ್‌ ಯಾತ್ರೆ ಮಾಡಬೇಕೆಂಬುದು ಪ್ರತಿಯೊಬ್ಬ ಮುಸ್ಲಿಂ ವ್ಯಕ್ತಿಯ ಕನಸಾಗಿರುತ್ತದೆ. ಆದರೆ ಎಲ್ಲರಿಂದ ಇದು ಸಾಧ್ಯವಿಲ್ಲ. ಅದಕ್ಕೆ ಅಲ್ಲಾಹನ ಕೃಪೆ ಬೇಕು ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಹಜ್‌ ಘರ್‌ ನಿರ್ಮಾಣಕ್ಕೆ ಈಗಾಗಲೇ 70 ಸೆಂಟ್ಸು ಜಾಗ ನಿಗದಿಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಅನುದಾನ ನೀಡಲು ಮುಂದೆ ಬಂದಿದ್ದು ಸದ್ಯದಲ್ಲೇಶಿಲಾನ್ಯಾಸ ನಡೆಯಲಿದೆ ಎಂದರು.

ಸಚಿವ ಜಮೀರ್‌ ಆಹ್ಮದ್‌ ಖಾನ್‌ಅವರು ಜಿಲ್ಲೆಯಿಂದ 11 ಉಲೇಮಾಗಳಿಗೆ ಹಾಗೂ ರಾಜ್ಯದಿಂದ 100ಕ್ಕಿಂತ ಹೆಚ್ಚು ಉಲೇಮಾಗಳಿಗೆ ಪವಿತ್ರ ಹಜ್‌ಯಾತ್ರೆ ಕೈಗೊಳ್ಳಲು ಸಹಾಯ ಮಾಡಲಿದ್ದಾರೆ ಎಂದು ಖಾದರ್‌ ತಿಳಿಸಿದರು.

ಮಂಗಳೂರು ಮೂಲಕ ಈ ಬಾರಿ ಒಟ್ಟು 747 ಮಂದಿ ಹಜ್‌ ಯಾತ್ರೆ ಕೈಕೊಳ್ಳಲಿದ್ದಾರೆ. ಇದರಲ್ಲಿ ದ.ಕ. ಜಿಲ್ಲೆಯ 610, ಉಡುಪಿ ಜಿಲ್ಲೆಯ 72, ಕೊಡಗಿನ 39, ಹಾಸನದ 20, ಚಿಕ್ಕಮಗಳೂರಿನ 6 ಮಂದಿ ಇದ್ದಾರೆ. ರಾಜ್ಯ ಮಟ್ಟದಲ್ಲಿ ಒಟ್ಟು 14 ಸಾವಿರ ಹಜ್‌ ಯಾತ್ರಾರ್ಥಿಗಳಿಂದ ಅರ್ಜಿಗಳು ಬಂದಿದ್ದವು. ಈ ಬಾರಿ 8,739 ಮಂದಿಗೆ ಅವಕಾಶ ಲಭಿಸಿದೆ. ಕಳೆದ ಬಾರಿ 6,300 ಮಂದಿಗೆ ಮಾತ್ರ ಅವಕಾಶ ಇತ್ತು ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಎ. ಮೊದಿನ್‌ಬಾವಾ, ಕೆ.ಎಸ್‌. ಮಹಮ್ಮದ್‌ ಮಸೂದ್‌, ಮುಖಂಡರಾದ ಮಹಮ್ಮದ್‌ ಮೋನು, ಜಿಲ್ಲಾ ವಕ್ಫ್ ಯು.ಕೆ. ಮೋನು ಕಣಚೂರು, ಬಿ.ಎಂ. ಝಕರಿಯಾ, ವೈ. ಮಹಮ್ಮದ್‌ ಕುಂಞಿ, ಬಿ.ಎಂ. ಮುಮ್ತಾಝ್ ಅಲಿ, ಎಸ್‌.ಎಂ. ರಶೀದ್‌ ಹಾಜಿ, ಹನೀಫ್‌ ಹಾಜಿ ಕೊಳತ್ತಮಜಲು, ಎಂ.ಎಸ್‌. ಕರೀಂ, ಕೆ.ಕೆ. ಸಾಹುಲ್ ಹಮೀದ್‌, ಹೈದರ್‌ ಪರ್ತಿಪಾಡಿ, ಅಬ್ದುಲ್ ರಶೀದ್‌, ಅಶ್ರಫ್‌, ಬಶೀರ್‌, ಮಹಮ್ಮದ್‌ ಕುಂಜತ್ತಬೆೈಲು, ಬಶೀರ್‌ ಬೆೈಕಂಪಾಡಿ, ಸಿರಾಜ್‌, ಮಹಮದ್‌ ಶರೀಫ್‌, ಹನೀಫ್‌ ಮಹಮದ್‌ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago