ಹಜ್ ಭವನಕ್ಕೆ ಟಿಪ್ಪುಸುಲ್ತಾನ್ ಹೆಸರಿಡುವ ಬದಲು ಅಬ್ದುಲ್ ಕಲಾಮ್ ಹೆಸರಿಡಿ: ಯಡಿಯೂರಪ್ಪ!
ಸದ್ಯ ಕರ್ನಾಟಕದಲ್ಲಿ ನಿರ್ಮಾಣವಾಗಿರುವ ಹಜ್ ಭವನಕ್ಕೆ ಹೆಸರಿಡುವುದರ ಕುರಿತಾದಂತೆ ವಾದ ವಿವಾದಗಳು ಸೃಷ್ಟಿಯಾಗುತ್ತಿದೆ. ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರವರು ಈ ಕುರಿತಾದಂತೆ ಹೇಳಿಕೆ ನೀಡಿ, ಟಿಪ್ಪು ಹೆಸರಿಡುವಂತೆ ಹಲವು ಮನವಿಗಳು ಬಂದಿವೆ ಎಂದು ಹೇಳಿದ್ದರು. ಇದೀಗ ಈ ವಿವಾದದ ಕುರಿತಾದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದಕ್ಕೆ ನಮಗೆ ಬಲವಾದ ವಿರೋಧವಿದ್ದು, ಬೇಕಾದರೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ರ ಹೆಸರಿಡಲಿ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ದ ಎನ್ಡಿಎ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಹೊತ್ತೆಗೆಯನ್ನು ಬಿಡಗುಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಈಡೇರಿಸುತ್ತಾರೆ ಎಂದು ಕಾತರರಾಗಿದ್ದರು. ಆದರೆ ಈಗ ಎಲ್ಲವೂ ಹುಸಿಯಾಗಿದೆ. ನಾನಿಗ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಕಾರ್ಯಕರ್ತರಿಗೂ ಹೇಳಿದ್ದೇನೆ ಕಾದು ನೋಡುತ್ತೇವೆ ಎಂದರು.
