ಬೆಂಗಳೂರು: ನಗರದ ನಾಗವಾರ ಬಳಿಯ ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಸಚಿವ ಜಮೀರ್ ಅಹ್ಮದ್ ಆಸಕ್ತಿ ತೋರಿದ್ದಾರೆ. ಮುಸ್ಲಿಂ ಧರ್ಮಗುರುಗಳು ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಒತ್ತಾಯಿಸುತ್ತಿದ್ದಾರೆ.
ಮತ್ತೆ ಐತಿಹಾಸಿಕ ವಿವಾದ ಪುರುಷನಾದ ಟಿಪ್ಪು ಸುಲ್ತಾನ್ ಹೆಸರು ಪ್ರಸ್ತಾಪಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರಿನ ಹೆಗೆಡ ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಹಜ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಟಿಪ್ಪು ಹೆಸರು ಇಡುತ್ತೇವೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಸರ್ಕಾರವನ್ನು ವಿವಾದಕ್ಕೆ ಸಿಲುಕಿಸುವಂತ ನಿರ್ಧಾರ ಕೈಗೆತ್ತಿಕೊಳ್ಳುತ್ತಿರುವ ಸಚಿವ ಅಹ್ಮದ್, ದೋಸ್ತಿ ಸರ್ಕಾರದ ಈ ಸಚಿವರು ಇಂತಹ ನಿರ್ಣಯ ಕೈಗೊಂಡರೆ ಹೆಚ್ ಡಿ ಕೆ ಸರ್ಕಾರಕ್ಕೆ ಕಂಟಕ ತಪ್ಪಿದಲ್ಲ.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಿಸಿತ್ತು. ಆದ್ರೆ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಸಿದ್ದು ಸರ್ಕಾರ ಇನ್ನಿಲ್ಲದಂತೆ ಕಾಡಿದ್ದ ಟಿಪ್ಪು ವಿವಾದವನ್ನು ಹೆಚ್ ಡಿ ಕೆ ತನ್ನ ಮೈ ಮೇಲೆ ಎಳೆದು ಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಕೋರ್ಟ್ ಕಲಾಪಗಳ ವಿಡಿಯೋ ಹಂಚಿಕೊಳ್ಳುವ ಮುನ್ನ ಎಚ್ಚರ.. ಅನುಮತಿ ಇಲ್ಲದೆ ಆಡಿಯೋ-ವಿಡಿಯೋ ಪೋಸ್ಟ್, ರೀಲ್ಸ್ ಮಾಡುವಂತಿಲ್ಲ; ಸುಪ್ರೀಂ ಆದೇಶ ನವದೆಹಲಿ:…
ಉಡುಪಿ : ನೇರ ಸಂದರ್ಶನ ಉಡುಪಿ : ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟರ್ಸ್ನ ಹರ್ಷ…
ಉಡುಪಿ : ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆ : ನೇರ ಸಂದರ್ಶನ ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ…
ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 28 ಮತ್ತು 29ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ ಕಾಪು : ಉಡುಪಿ…
ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…
ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…