ಬೆಂಗಳೂರು: ನಗರದ ನಾಗವಾರ ಬಳಿಯ ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಸಚಿವ ಜಮೀರ್ ಅಹ್ಮದ್ ಆಸಕ್ತಿ ತೋರಿದ್ದಾರೆ. ಮುಸ್ಲಿಂ ಧರ್ಮಗುರುಗಳು ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಒತ್ತಾಯಿಸುತ್ತಿದ್ದಾರೆ.
ಮತ್ತೆ ಐತಿಹಾಸಿಕ ವಿವಾದ ಪುರುಷನಾದ ಟಿಪ್ಪು ಸುಲ್ತಾನ್ ಹೆಸರು ಪ್ರಸ್ತಾಪಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ಬೆಂಗಳೂರಿನ ಹೆಗೆಡ ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಹಜ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ನಂತರ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಟಿಪ್ಪು ಹೆಸರು ಇಡುತ್ತೇವೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಸರ್ಕಾರವನ್ನು ವಿವಾದಕ್ಕೆ ಸಿಲುಕಿಸುವಂತ ನಿರ್ಧಾರ ಕೈಗೆತ್ತಿಕೊಳ್ಳುತ್ತಿರುವ ಸಚಿವ ಅಹ್ಮದ್, ದೋಸ್ತಿ ಸರ್ಕಾರದ ಈ ಸಚಿವರು ಇಂತಹ ನಿರ್ಣಯ ಕೈಗೊಂಡರೆ ಹೆಚ್ ಡಿ ಕೆ ಸರ್ಕಾರಕ್ಕೆ ಕಂಟಕ ತಪ್ಪಿದಲ್ಲ.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಿಸಿತ್ತು. ಆದ್ರೆ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಸಿದ್ದು ಸರ್ಕಾರ ಇನ್ನಿಲ್ಲದಂತೆ ಕಾಡಿದ್ದ ಟಿಪ್ಪು ವಿವಾದವನ್ನು ಹೆಚ್ ಡಿ ಕೆ ತನ್ನ ಮೈ ಮೇಲೆ ಎಳೆದು ಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…