Featured

ಹಣಕ್ಕಾಗಿ ರಾಕ್ಷಸಿ ಕೃತ್ಯವೆಸಗಿದ ದೊಡ್ಡಮ್ಮ : ಮಗಳ ತೊಡೆಗೆ  ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕಿರುಕುಳ  – Vishwanews24

ಹಣಕ್ಕಾಗಿ ರಾಕ್ಷಸಿ ಕೃತ್ಯವೆಸಗಿದ ದೊಡ್ಡಮ್ಮ : ಮಗಳ ತೊಡೆಗೆ  ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕಿರುಕುಳ

ತುಮಕೂರು : ಬ್ಯಾಂಕ್​ನಲ್ಲಿ ಬಾಲಕಿಯ ಹೆಸರಿನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಘಟನೆ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನಂಜಮ್ಮ ಕಿರುಕುಳ ನೀಡಿದ್ದಾರೆ. ಲಕ್ಷ್ಮೀ ತಾಯಿ ನರಸಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮೃತ ತಾಯಿ ನರಸಮ್ಮ ಹಾಗೂ ಬಾಲಕಿ ಲಕ್ಷ್ಮೀ ಹೆಸರಿನಲ್ಲಿ ಜಂಟಿ ಖಾತೆ ಇತ್ತು.

ಮೃತ ತಾಯಿ ತನ್ನ ಮಗಳಿಗಾಗಿ ನಾಲ್ಕು ಲಕ್ಷ ಫಿಕ್ಸ್ ಡೆಪಾಸಿಟ್ ಮಾಡಿದ್ದರು. ಇದು ನರಸಮ್ಮ ಅವರ ಕಣ್ಣು ಕುಕ್ಕುವಂತೆ ಮಾಡಿತು. ಹೀಗಾಗಿ ನಂಜಮ್ಮ ಶಿವರಾತ್ರಿ ಹಬ್ಬಕ್ಕೆಂದು (ಮಾ.09) ಲಕ್ಷ್ಮೀಯನ್ನು ತಮ್ಮ ಊರಿಗೆ ಕರೆಸಿದ್ದಾಳೆ. ಬಳಿಕ ನರಸಮ್ಮ ಚೆಕ್​ಗೆ ಸಹಿ‌ ಮಾಡು ಅಂತ ಬಾಲಕಿ ಲಕ್ಷ್ಮೀಗೆ ಕಿರುಕುಳ ನೀಡಿದ್ದಾಳೆ. ಆದರೂ ಬಾಲಕಿ ಲಕ್ಷ್ಮೀ ಒಪ್ಪದಿದ್ದಾಗ ನರಸಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಬಾಲಕಿ ಲಕ್ಷ್ಮೀ ತೊಡೆಗೆ ಸುಟ್ಟಿದ್ದಾಳೆ. ನಂಜಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟಿದ್ದಾಳೆ.

ಈ ವೇಳೆ ಬಾಲಕಿ ಲಕ್ಷ್ಮೀ ಕಿರುಚದಂತೆ ನಂಜಮ್ಮ ಮಗ ಬಸವರಾಜ್​ ಆಕೆಯ ಬಾಯಿ ಮುಚ್ಚಿದ್ದಾನೆ. ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೂಜಾರಹಳ್ಳಿಯಲ್ಲಿರುವ ಅಜ್ಜಿ ಊರಲ್ಲಿ ವಾಸವಿದ್ದ ಬಾಲಕಿ ಲಕ್ಷ್ಮಿಯನ್ನ ಊರಿಗೆ ಕರೆದುಕೊಂಡು ಬರುವಂತೆ ಪೋಷಕರಿಗೆ ತಿಳಿಸಿದ್ದ ಶಾಲಾ ಶಿಕ್ಷಕರು. ಈ ಹಿನ್ನೆಲೆಯಲ್ಲಿ ಬಾಲಕಿಯನ್ನ ಕರೆತರಲು ಹೋಗಿದ್ದ ಲಕ್ಷ್ಮೀ ಅಜ್ಜಿ ಹೋಗಿದ್ದರು. ಈ ವೇಳೆ ಬಾಲಕಿಗೆ ಟೀ ಚೆಲ್ಲಿದೆ ಎಂದು ಸುಳ್ಳು ಹೇಳಿ ಲಕ್ಷ್ಮೀ ದೊಡ್ಡಮ್ಮ ನಂಜಮ್ಮ ಬೆದರಿಕೆ ಹಾಕಿದ್ದಳು. ಬಾಲಕಿಯನ್ನ ಪೂಜಾರಹಳ್ಳಿಗೆ ಕರೆತಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬಾಲಕಿ ಲಕ್ಷ್ಮೀಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

12 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

13 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

14 hours ago