Featured

ಹಣಕ್ಕಾಗಿ ರಾಕ್ಷಸಿ ಕೃತ್ಯವೆಸಗಿದ ದೊಡ್ಡಮ್ಮ : ಮಗಳ ತೊಡೆಗೆ  ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕಿರುಕುಳ  – Vishwanews24

ಹಣಕ್ಕಾಗಿ ರಾಕ್ಷಸಿ ಕೃತ್ಯವೆಸಗಿದ ದೊಡ್ಡಮ್ಮ : ಮಗಳ ತೊಡೆಗೆ  ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕಿರುಕುಳ

ತುಮಕೂರು : ಬ್ಯಾಂಕ್​ನಲ್ಲಿ ಬಾಲಕಿಯ ಹೆಸರಿನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಘಟನೆ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನಂಜಮ್ಮ ಕಿರುಕುಳ ನೀಡಿದ್ದಾರೆ. ಲಕ್ಷ್ಮೀ ತಾಯಿ ನರಸಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮೃತ ತಾಯಿ ನರಸಮ್ಮ ಹಾಗೂ ಬಾಲಕಿ ಲಕ್ಷ್ಮೀ ಹೆಸರಿನಲ್ಲಿ ಜಂಟಿ ಖಾತೆ ಇತ್ತು.

ಮೃತ ತಾಯಿ ತನ್ನ ಮಗಳಿಗಾಗಿ ನಾಲ್ಕು ಲಕ್ಷ ಫಿಕ್ಸ್ ಡೆಪಾಸಿಟ್ ಮಾಡಿದ್ದರು. ಇದು ನರಸಮ್ಮ ಅವರ ಕಣ್ಣು ಕುಕ್ಕುವಂತೆ ಮಾಡಿತು. ಹೀಗಾಗಿ ನಂಜಮ್ಮ ಶಿವರಾತ್ರಿ ಹಬ್ಬಕ್ಕೆಂದು (ಮಾ.09) ಲಕ್ಷ್ಮೀಯನ್ನು ತಮ್ಮ ಊರಿಗೆ ಕರೆಸಿದ್ದಾಳೆ. ಬಳಿಕ ನರಸಮ್ಮ ಚೆಕ್​ಗೆ ಸಹಿ‌ ಮಾಡು ಅಂತ ಬಾಲಕಿ ಲಕ್ಷ್ಮೀಗೆ ಕಿರುಕುಳ ನೀಡಿದ್ದಾಳೆ. ಆದರೂ ಬಾಲಕಿ ಲಕ್ಷ್ಮೀ ಒಪ್ಪದಿದ್ದಾಗ ನರಸಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಬಾಲಕಿ ಲಕ್ಷ್ಮೀ ತೊಡೆಗೆ ಸುಟ್ಟಿದ್ದಾಳೆ. ನಂಜಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟಿದ್ದಾಳೆ.

ಈ ವೇಳೆ ಬಾಲಕಿ ಲಕ್ಷ್ಮೀ ಕಿರುಚದಂತೆ ನಂಜಮ್ಮ ಮಗ ಬಸವರಾಜ್​ ಆಕೆಯ ಬಾಯಿ ಮುಚ್ಚಿದ್ದಾನೆ. ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೂಜಾರಹಳ್ಳಿಯಲ್ಲಿರುವ ಅಜ್ಜಿ ಊರಲ್ಲಿ ವಾಸವಿದ್ದ ಬಾಲಕಿ ಲಕ್ಷ್ಮಿಯನ್ನ ಊರಿಗೆ ಕರೆದುಕೊಂಡು ಬರುವಂತೆ ಪೋಷಕರಿಗೆ ತಿಳಿಸಿದ್ದ ಶಾಲಾ ಶಿಕ್ಷಕರು. ಈ ಹಿನ್ನೆಲೆಯಲ್ಲಿ ಬಾಲಕಿಯನ್ನ ಕರೆತರಲು ಹೋಗಿದ್ದ ಲಕ್ಷ್ಮೀ ಅಜ್ಜಿ ಹೋಗಿದ್ದರು. ಈ ವೇಳೆ ಬಾಲಕಿಗೆ ಟೀ ಚೆಲ್ಲಿದೆ ಎಂದು ಸುಳ್ಳು ಹೇಳಿ ಲಕ್ಷ್ಮೀ ದೊಡ್ಡಮ್ಮ ನಂಜಮ್ಮ ಬೆದರಿಕೆ ಹಾಕಿದ್ದಳು. ಬಾಲಕಿಯನ್ನ ಪೂಜಾರಹಳ್ಳಿಗೆ ಕರೆತಂದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬಾಲಕಿ ಲಕ್ಷ್ಮೀಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago