Featured

ಹಣೆಗೆ ಕುಂಕುಮ ಹಚ್ಚುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಹುದು ; ಓದಿ ಈವರದಿ -Vishwanews24

ಭಾರತೀಯ ಸಂಪ್ರದಾಯದಲ್ಲಿ ಕುಂಕುಮಕ್ಕೆ ವಿಶೇಷವಾದ ಸ್ಥಾನಮಾನವಿದೆ. ಹಣೆಯ ಮೇಲೊಂದು ಬಿಂದಿಯಿಟ್ಟರೇನೆ ಹೆಣ್ಣಿನ ಮುಖದ ಮೇಕಪ್ನ ಮೆರುಗು ಹೆಚ್ಚುವುದು. ಆದರೆ, ಕುಂಕುಮ ಬರೀ ಅಂದ ಹೆಚ್ಚಿಸುವ ಪ್ರಸಾದನವಷ್ಟೇ ಅಲ್ಲ, ಅದರ ಬಳಕೆ ಹಿಂದೆ ಆರೋಗ್ಯದ ಗುಟ್ಟು ಅಡಗಿದೆ. ಕುಂಕುಮವನ್ನು ಹಣೆಯ ಮಧ್ಯಭಾಗದಲ್ಲಿಡುತ್ತೇವೆ. ಈ ಭಾಗದಲ್ಲಿ ಚಕ್ರ ಬಿಂದುವಿದ್ದು, ಅದನ್ನು ಒತ್ತಿ ಹಿಡಿಯುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಹುದು.

ನಾನಾ ಸಮಸ್ಯೆಗಿದೆ ಪರಿಹಾರ: ಹುಬ್ಬುಗಳ ನಡುವೆ ಇರುವ ಭಾಗಕ್ಕೆ ಚಕ್ರ ಬಿಂದು ಎನ್ನುತ್ತಾರೆ. ಭಾರತೀಯ ವೈದ್ಯಶಾಸ್ತ್ರದ ಪ್ರಕಾರ ಅನೇಕ ಆರೋಗ್ಯ ಸಮಸ್ಯೆಗಳನ್ನು ಶಮನ ಮಾಡುವ ಸಾಮಥ್ರ್ಯ ಈ ಚಕ್ರಕ್ಕಿದೆ. ಯೋಗಶಾಸ್ತ್ರದಲ್ಲಿ ಚಕ್ರ ಬಿಂದುವಿಗೆ ‘ಆಜ್ಞಾ ಚಕ್ರ’ ಅಥವಾ ‘ಆಗ್ಯ ಚಕ್ರ’ ಎಂದು ಕರೆಯುತ್ತಾರೆ. ಈ ಚಕ್ರ ಅಂತರ್ದೃಷ್ಟಿ, ಬುದ್ಧಿವಂತಿಕೆ ಹಾಗೂ ಅರ್ಥೈಸಿಕೊಳ್ಳುವ ಸಾಮಥ್ರ್ಯದೊಂದಿಗೆ ಸಂಬಂಧ ಹೊಂದಿದೆ. ಇನ್ನು ಪೌರಾಣಿಕ ಹಿನ್ನೆಲೆಯಲ್ಲಿ ನೋಡುವುದಾದರೆ ಶಿವನಿಗೆ ಮೂರನೇ ಕಣ್ಣಿರುವುದು ಚಕ್ರ ಬಿಂದುವಿರುವ ಸ್ಥಳದಲ್ಲೇ. ಹೀಗಾಗಿ ಈ ಬಿಂದುವು ಶಕ್ತಿ, ಸಾಮಥ್ರ್ಯ ಹಾಗೂ ಬುದ್ಧಿಶಕ್ತಿಯ ಕೇಂದ್ರಬಿಂದು ಎಂದು ಕೂಡ ಹೇಳಲಾಗುತ್ತದೆ. ಈ ಬಿಂದುವನ್ನು ಗುರಿಯಾಗಿಟ್ಟುಕೊಂಡು ವ್ಯಕ್ತಿ ತನ್ನ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಅಕ್ಯುಪ್ರೆಷರ್ ಪಾಯಿಂಟ್: ಅಕ್ಯುಪ್ರೆಷರ್ ಚಿಕಿತ್ಸೆಯಲ್ಲಿ ಶರೀರದ ಕೆಲವೊಂದು ನಿರ್ದಿಷ್ಟ ಬಿಂದುಗಳನ್ನು ಒತ್ತಿ ಹಿಡಿಯುವ ಮೂಲಕ ಅನೇಕ ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅಕ್ಯುಪ್ರೆಷರ್ ಚಿಕಿತ್ಸೆಯಲ್ಲಿ ಚಕ್ರ ಬಿಂದುವನ್ನು ಮೂರನೇ ಪ್ರಮುಖ ಬಿಂದುವಾಗಿ ಪರಿಗಣಿಸಲಾಗುತ್ತಿದ್ದು, ಇದರ ಮೇಲೆ ಒತ್ತಡ ಹೇರುವ ಮೂಲಕ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಸಹಿಸಲಾಸಾಧ್ಯವಾದ ತಲೆನೋವಿರುವಾಗ ಕೆಲವು ನಿಮಿಷಗಳ ಕಾಲ ಚಕ್ರ ಬಿಂದುವನ್ನು ಬೆರಳಲ್ಲಿ ಒತ್ತಿ ಹಿಡಿಯುವ ಮೂಲಕ ತಕ್ಷಣ ಪರಿಹಾರ ಪಡೆಯಬಹುದು. ಇದು ರಕ್ತದ ಹರಿವನ್ನು ಉತ್ತಮಪಡಿಸುವ ಮೂಲಕ ತಲೆನೋವಿನಿಂದ ಮುಕ್ತಿ ನೀಡುತ್ತದೆ.

ಉಸಿರಾಟವನ್ನು ಉತ್ತಮಪಡಿಸುತ್ತದೆ: ಚಕ್ರ ಬಿಂದುವಿನ ಮೇಲೆ ನಿರ್ದಿಷ್ಟ ಪ್ರಮಾಣದ ಒತ್ತಡ ಹೇರುವುದರಿಂದ ಉಸಿರಾಟದ ತೊಂದರೆಗಳು ದೂರವಾಗುತ್ತವೆ. ನಿಮ್ಮ ಉಸಿರಾಟ ಪ್ರಕ್ರಿಯೆಯನ್ನು ಇದು ಸುಧಾರಿಸುತ್ತದೆ. ಇದರಿಂದ ದೇಹದ ಎಲ್ಲ ಭಾಗಗಳಿಗೂ ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗುವ ಮೂಲಕ ಹೊಸ ಚೈತನ್ಯ ಒಡಮೂಡುತ್ತದೆ.
ಟ್ರಿಗೆಮಿನಲ್ ಎಂಬ ನರವೊಂದು ಚಕ್ರ ಬಿಂದುವಿನ ಮೂಲಕ ಹಾದು ಹೋಗುತ್ತದೆ. ನಮ್ಮ, ಮುಖಕ್ಕೆ ಸ್ಪರ್ಶದ ಅನುಭವ ತಿಳಿಯಲು ಈ ನರವೇ ಕಾರಣವಾಗಿದೆ. ಈ ಬಿಂದುವನ್ನು ಒತ್ತುವುದರಿಂದ ನರಕ್ಕೆ ಅಗತ್ಯ ಪ್ರಮಾಣದಲ್ಲಿ ಪ್ರಚೋದನೆ ಸಿಗುವ ಮೂಲಕ ಅದು ಮೂಗಿನ ಬ್ಲಾಕೇಜ್ಗಳನ್ನು ಸರಿಪಡಿಸುವ ಜೊತೆಗೆ ಸೈನಸ್ ತೊಂದರೆಯಿಂದ ಮುಕ್ತಿ ನೀಡುತ್ತದೆ.

ದೃಷ್ಟಿಗೆ ಶಕ್ತಿ: ಚಕ್ರ ಬಿಂದುವನ್ನು ಪ್ರತಿದಿನ ಕೆಲವು ನಿಮಿಷಗಳ ಕಾಲ ಒತ್ತಿ ಹಿಡಿಯುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ. ಕಣ್ಣಿಗೆ ಸಂಬಂಧಿಸಿದ ನರ ಈ ಬಿಂದುವಿನ ಮೂಲಕ ಹಾದು ಹೋಗುತ್ತದೆ. ಈ ನರವು ಇಡೀ ಮುಖವನ್ನು ಪ್ರಚೋದಿಸುವ ಗುಣ ಹೊಂದಿದೆ. ಹೀಗಾಗಿ ಈ ನರವನ್ನು ಒತ್ತಿ ಹಿಡಿಯುವುದರಿಂದ ಮುಖದಲ್ಲಿ ರಕ್ತ ಸಂಚಾರ ಉತ್ತಮಗೊಂಡು ತ್ವಚೆಯ ಕಾಂತಿ ಹೆಚ್ಚುವ ಜೊತೆಗೆ ವಯಸ್ಸಿನ ಕಾರಣಕ್ಕೆ ಮುಖದ ಮೇಲಾಗುವ ಬದಲಾವಣೆಗಳನ್ನು ದೂರ ಮಾಡಬಹುದಾಗಿದೆ.

ಖಿನ್ನತೆಯನ್ನು ಹೋಗಲಾಡಿಸುತ್ತದೆ: ಚಕ್ರ ಬಿಂದುವನ್ನು ಒತ್ತಿ ಹಿಡಿಯುವುದರಿಂದ ಖಿನ್ನತೆ, ಅಪಸ್ಮಾರ ಸೇರಿದಂತೆ ಕೆಲವೊಂದು ಮಾನಸಿಕ ಕಾಯಿಲೆಗಳು ದೂರವಾಗುತ್ತವೆ.

ಕಿವಿಯನ್ನು ಚುರುಕಾಗಿಸುತ್ತದೆ: ಈ ನರವನ್ನು ಒತ್ತಿ ಹಿಡಿಯುವುದರಿಂದ ಕಿವಿಯಲ್ಲಿನ ಅಡೆತಡೆಗಳು ದೂರವಾಗುತ್ತವೆ. ಜೊತೆಗೆ ಕಿವಿಯ ನಳಿಕೆಯಲ್ಲಿನ ರಂಧ್ರಗಳನ್ನು ತೆರೆಯುವ ಮೂಲಕ ಶಬ್ದಗಳು ನಿಮಗೆ ಸರಿಯಾಗಿ ಕೇಳಿಸುವಂತೆ ಮಾಡುತ್ತದೆ.

ಸುಖ ನಿದ್ರೆ: ಚಕ್ರ ಬಿಂದುವನ್ನು ಒತ್ತಿ ಹಿಡಿಯುವುದರಿಂದ ನಿದ್ರಾಹೀನತೆ ದೂರವಾಗುತ್ತದೆ. ರಾತ್ರಿ ಸುಖ ನಿದ್ರೆ ಮಾಡಲು ಪ್ರತಿದಿನ ಕೆಲವು ನಿಮಿಷಗಳ ಕಾಲ ಈ ಬಿಂದುವನ್ನು ಬೆರಳುಗಳಿಂದ ಒತ್ತಿ ಹಿಡಿದರಾಯಿತು. ಚಕ್ರ ಬಿಂದುವನ್ನು ಒತ್ತಿ ಹಿಡಿದಾಗ ಇದು ಮಿದುಳಿನಲ್ಲಿರುವ ಪುಟ್ಟ ಕಾಳಿನ ಗಾತ್ರದ ಬಿಂದುವನ್ನು ಪ್ರಚೋದಿಸುತ್ತದೆ. ಇದರಿಂದ ಚೆನ್ನಾಗಿ ನಿದ್ರೆ ಬರುತ್ತದೆ.

ಸ್ಮರಣಶಕ್ತಿ ಹೆಚ್ಚುತ್ತದೆ: ಚಕ್ರ ಬಿಂದುವನ್ನು ಒತ್ತಿ ಹಿಡಿಯುವ ಮೂಲಕ ಸ್ಮರಣಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಈ ಬಿಂದುವನ್ನು ಒತ್ತಿ ಹಿಡಿಯುವ ಮೂಲಕ ನೀವೇನು ಕಲಿತಿದ್ದೀರಿ ಎಂಬುದನ್ನು ನೆನಪಿಸಿಕೊಳ್ಳಬಹುದು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago