Featured

ಹಣ ಪಾವತಿಸಿ ಇಲ್ಲವೇ ಜೈಲು ಶಿಕ್ಷೆಯನ್ನು ಎದುರಿಸಿ : ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್‌ ಆದೇಶ – Vishwanews24

ಹೊಸದಿಲ್ಲಿ : ಟೆಲಿಕಾಂ ಉಪಕರಣ ಉತ್ಪಾದನಾ ಸಂಸ್ಥೆ ಎರಿಕ್‌ಸನ್‌ ಗೆ 550 ಕೋಟಿ ರೂ. ಬಾಕಿ ಪಾವತಿಸದಿರುವ ಮೂಲಕ ಆರ್‌ ಕಾಮ್‌ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ಉದ್ದೇಶಪೂರ್ವಕ ಸುಪ್ರೀಂ ಕೋರ್ಟ್‌ ಆದೇಶದ ಉಲ್ಲಂಘನೆ ಮಾಡಿ ಕೋರ್ಟ್‌ ನಿಂದನೆ ಎಸಗಿದ್ದಾರೆ; ಆದುದರಿಂದ ಅವರು ಕೋರ್ಟ್‌ ನಿಂದನೆಯ ಕಾನೂನು ಕ್ರಮದಿಂದ ಪಾರಾಗಲು ನಾಲ್ಕು ವಾರಗಳ ಒಳಗೆ 453 ಕೋಟಿ ರೂ. ಪಾವತಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಇಂದು  ಹೇಳಿತು.

ನಾಲ್ಕು ವಾರಗಳ ಒಳಗೆ 453 ಕೋಟಿ ರೂ. ಪಾವತಿಸದಿದ್ದರೆ ಆರೋಪಿಗಳು ಮೂರು ತಿಂಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾದೀತು ಎಂದು ಜಸ್ಟಿಸ್‌ ಆರ್‌ ಎಫ್ ನಾರೀಮನ್‌ ಮತ್ತು ವಿನೀತ್‌ ಶರಣ್‌ ಅವರನ್ನು ಒಳಗೊಂಡ ಪೀಠ ಎಚ್ಚರಿಕೆ ನೀಡಿತು.

ಹಾಗೆಯೇ ರಿಲಯನ್ಸ್‌ ಟೆಲಿಕಾಂ ಮತ್ತು ರಿಲಯನ್ಸ್‌ ಇನ್‌ಫ್ರಾಟೆಲ್‌ ತಲಾ 1 ಕೋಟಿ ರೂ.ಗಳನ್ನು ನಾಲ್ಕು ವಾರಗಳ ಒಳಗೆ ಸರ್ವೋಚ್ಚ ನ್ಯಾಯಾಲಯದ ರಿಜಿಸ್ಟ್ರಿಗೆ ಪಾವತಿಸಬೇಕು; ಇಲ್ಲದಿದ್ದರೆ ಅಧ್ಯಕ್ಷ ಅನಿಲ್‌ ಅಂಬಾನಿ ಅವರು ಒಂದು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುವುದು ಎಂದು ಕೋರ್ಟ್‌ ಹೇಳಿತು.

ರಿಲಯನ್ಸ್‌ ಗ್ರೂಪ್‌ ಈಗಾಗಲೇ ಕೋರ್ಟ್‌ ರಿಜಿಸ್ಟ್ರಿಯಲ್ಲಿ ಠೇವಣಿ ಇರಿಸಿರುವ 118 ಕೋಟಿ ರೂ.ಗಳನ್ನು ಎರಿಕ್‌ಸನ್‌ ಕಂಪೆನಿಗೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿ

ತು. 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago