ನವದೆಹಲಿ: ಹತ್ತು ರೂಪಾಯಿ ನಾಣ್ಯ ಸೇರಿದಂತೆ ಯಾವುದೇ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ನಾಣ್ಯವನ್ನು ವ್ಯವಾಹರದಲ್ಲಿ ನಿರಾಕರಿಸುವಂತಿಲ್ಲವೆಂದು ಆರ್ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ಹೇಳಿದೆ.
ಹತ್ತು ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ಹಲವೆಡೆ ಹಿಂದೇಟು ಹಾಕುತ್ತಾರೆ. ಹಲವರು ಹತ್ತು ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳುವುದೇ ಇಲ್ಲ, ಆದರೆ ಆರ್ಬಿಐ ಇದನ್ನು ಸ್ಪಷ್ಟವಾಗಿ ತಪ್ಪು ಎಂದು ಹೇಳಿದ್ದು, 50 ಪೈಸೆಗಿಂತಲೂ ಹೆಚ್ಚಿನ ಮೌಲ್ಯದ ಯಾವ ನಾಣ್ಯವನ್ನೂ ತೆಗೆದುಕೊಳ್ಳದೆ ನಿರಾಕರಿಸುವಂತಿಲ್ಲ ಎಂದು ಆರ್ಬಿಐ ಹೇಳಿದೆ.
ಕೆಲವರು ಅಕಾರಣವಾಗಿ ನಾಣ್ಯ ನಿರಾಕರಿಸುತ್ತಿದ್ದಾರೆ ,ಒಂದು, ಎರಡು, ಐದು ಮತ್ತು ಹತ್ತು ರೂಪಾಯಿಯ ಹೊಸ ಮಾದರಿಯ ನಾಣ್ಯಗಳನ್ನು ಆರ್ಬಿಐ ಕೆಲವು ತಿಂಗಳ ಮುನ್ನಾ ಬಿಡುಗಡೆಗೊಳಿಸಿತ್ತು. ಇವನ್ನು ತೆಗೆದುಕೊಳ್ಳಲು ಕೆಲವು ವ್ಯಾಪಾರಸ್ತರು ಅಕಾರಣವಾಗಿ ನಿರಾಕರಿಸಿದ್ದರು, ಇದರಿಂದ ಇಂದು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಆರ್ಬಿಐ ಮೇಲಿನಂತೆ ಸೂಚನೆ ನೀಡಿದೆ.
ನಾಣ್ಯಗಳ ಕುರಿತಾಗಿ ಕೆಲವು ಗಾಳಿ ಸುದ್ದಿಗಳೂ ಸಹ ಹರಡಿ ನಾಣ್ಯಗಳನ್ನು ಸ್ವೀಕರಿಸಲು ವ್ಯಾಪಾರಿಗಳು ನಿರಾಕರಿಸುತ್ತಿದ್ದಾರೆಂದು ತಿಳಿದು ಬಂದಿರುವ ಕಾರಣ, ಹೀಗೆ ಗಾಳಿ ಸುದ್ದಿ ಹರಡಿಸಬಾರದೆಂದು ಆರ್ಬಿಐ ಮನವಿ ಮಾಡಿದೆ.
ಇಷ್ಟಾಗಿಯೂ ವ್ಯಾಪಾರಿಗಳು ಅಥವಾ ಇನ್ನಾರಾದರೂ ವ್ಯವಹಾರದ ಸಂಬಂಧ ಆರ್ಬಿಐನ ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸಿದರೆ, ಆರ್ಬಿಐನ ಸೂಚನೆಯ ಉಲ್ಲಂಘನೆ ಎಂದು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಆರ್ಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
50 ಪೈಸೆ, ಒಂದು ರೂಪಾಯಿ, ಎರಡು ರೂಪಾಯಿ, ಐದು ರೂಪಾಯಿ, ಹತ್ತು ರೂಪಾಯಿಯ ನಾಣ್ಯಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿವೆ. 50 ಪೈಸೆಗಿಂತಲೂ ಕಡಿಮೆ ಮೌಲ್ಯದ ನಾಣ್ಯಗಳು ಪ್ರಸ್ತುತ ಚಾಲ್ತಿಯಲ್ಲಿಲ್ಲ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…