Featured

ಹತ್ತು ರೂಪಾಯಿ ನಾಣ್ಯ,50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ನಾಣ್ಯವನ್ನು ವ್ಯವಾಹರದಲ್ಲಿ ನಿರಾಕರಿಸುವಂತಿಲ್ಲ : ಆರ್‌ಬಿಐ -Vishwanews24

ನವದೆಹಲಿ: ಹತ್ತು ರೂಪಾಯಿ ನಾಣ್ಯ ಸೇರಿದಂತೆ ಯಾವುದೇ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ನಾಣ್ಯವನ್ನು ವ್ಯವಾಹರದಲ್ಲಿ ನಿರಾಕರಿಸುವಂತಿಲ್ಲವೆಂದು ಆರ್‌ಬಿಐ (ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ) ಹೇಳಿದೆ.

ಹತ್ತು ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ಹಲವೆಡೆ ಹಿಂದೇಟು ಹಾಕುತ್ತಾರೆ. ಹಲವರು ಹತ್ತು ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳುವುದೇ ಇಲ್ಲ, ಆದರೆ ಆರ್‌ಬಿಐ ಇದನ್ನು ಸ್ಪಷ್ಟವಾಗಿ ತಪ್ಪು ಎಂದು ಹೇಳಿದ್ದು, 50 ಪೈಸೆಗಿಂತಲೂ ಹೆಚ್ಚಿನ ಮೌಲ್ಯದ ಯಾವ ನಾಣ್ಯವನ್ನೂ ತೆಗೆದುಕೊಳ್ಳದೆ ನಿರಾಕರಿಸುವಂತಿಲ್ಲ ಎಂದು ಆರ್‌ಬಿಐ ಹೇಳಿದೆ.

ಕೆಲವರು ಅಕಾರಣವಾಗಿ ನಾಣ್ಯ ನಿರಾಕರಿಸುತ್ತಿದ್ದಾರೆ ,ಒಂದು, ಎರಡು, ಐದು ಮತ್ತು ಹತ್ತು ರೂಪಾಯಿಯ ಹೊಸ ಮಾದರಿಯ ನಾಣ್ಯಗಳನ್ನು ಆರ್‌ಬಿಐ ಕೆಲವು ತಿಂಗಳ ಮುನ್ನಾ ಬಿಡುಗಡೆಗೊಳಿಸಿತ್ತು. ಇವನ್ನು ತೆಗೆದುಕೊಳ್ಳಲು ಕೆಲವು ವ್ಯಾಪಾರಸ್ತರು ಅಕಾರಣವಾಗಿ ನಿರಾಕರಿಸಿದ್ದರು, ಇದರಿಂದ ಇಂದು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಆರ್‌ಬಿಐ ಮೇಲಿನಂತೆ ಸೂಚನೆ ನೀಡಿದೆ.

ನಾಣ್ಯಗಳ ಕುರಿತಾಗಿ ಕೆಲವು ಗಾಳಿ ಸುದ್ದಿಗಳೂ ಸಹ ಹರಡಿ ನಾಣ್ಯಗಳನ್ನು ಸ್ವೀಕರಿಸಲು ವ್ಯಾಪಾರಿಗಳು ನಿರಾಕರಿಸುತ್ತಿದ್ದಾರೆಂದು ತಿಳಿದು ಬಂದಿರುವ ಕಾರಣ, ಹೀಗೆ ಗಾಳಿ ಸುದ್ದಿ ಹರಡಿಸಬಾರದೆಂದು ಆರ್‌ಬಿಐ ಮನವಿ ಮಾಡಿದೆ.

ಇಷ್ಟಾಗಿಯೂ ವ್ಯಾಪಾರಿಗಳು ಅಥವಾ ಇನ್ನಾರಾದರೂ ವ್ಯವಹಾರದ ಸಂಬಂಧ ಆರ್‌ಬಿಐನ ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸಿದರೆ, ಆರ್‌ಬಿಐನ ಸೂಚನೆಯ ಉಲ್ಲಂಘನೆ ಎಂದು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಆರ್‌ಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

50 ಪೈಸೆ, ಒಂದು ರೂಪಾಯಿ, ಎರಡು ರೂಪಾಯಿ, ಐದು ರೂಪಾಯಿ, ಹತ್ತು ರೂಪಾಯಿಯ ನಾಣ್ಯಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿವೆ. 50 ಪೈಸೆಗಿಂತಲೂ ಕಡಿಮೆ ಮೌಲ್ಯದ ನಾಣ್ಯಗಳು ಪ್ರಸ್ತುತ ಚಾಲ್ತಿಯಲ್ಲಿಲ್ಲ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago