Featured

ಹತ್ತು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಮೇಳ : ಮಧ್ಯಪ್ರದೇಶದ ಭೋಪಾಲ್‍ನಲ್ಲಿ ವಿಶ್ವ ದಾಖಲೆ ಬರೆದ ಬಿಜೆಪಿ

ಭೋಪಾಲ್‍ :ಬಿಜೆಪಿ ಹಾಗೂ ಮೋದಿ ಅವರ ವರ್ಚಸ್ಸು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಷ್ಟ್ರದ ಹಳ್ಳಿ ಹಳ್ಳಿಗಳಿಗೂ ಕೇಸರಿ ಪಡೆ ಲಗ್ಗೆಯಿಡುತ್ತಿದೆ. ಜನರ ಮನಸ್ಸನ್ನು ಗೆಲ್ಲುವ ಮೂಲಕ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುತ್ತಿದೆ. ಸದ್ಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಮತ್ತೊಂದು ಬಾರಿ ಕಳೆದ ಲೋಕಸಭೆ ಚುನಾವಣೆಯಂತೆಯೇ ಗೆಲುವನ್ನು ಪಡೆದು ಅಧಿಕಾರದ ಗದ್ದುಗೆಗೇರಲು ಮಾಸ್ಟರ್ ಪ್ಲಾನ್ ಗಳನ್ನು ರೂಪಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ಪ್ರಚಾರ ಕಾರ್ಯವನ್ನು ಶುರು ಮಾಡಿಕೊಂಡಿದೆ. ಇದರ ಭಾಗವಾಗಿ  ಮಧ್ಯಪ್ರದೇಶದ ಭೋಪಾಲ್ ನಲ್ಲಿ ಐತಿಹಾಸಿಕ ಸಮಾವೇಶವೊಂದನ್ನು ಬಿಜೆಪಿ ಆಯೋಜನೆ ಮಾಡಿತ್ತು. ಕಾರ್ಯಕರ್ತರ ಮಹಾಕುಂಭ ಎಂದು ಈ ಸಮಾವೇಶಕ್ಕೆ ಹೆಸರಿಡಲಾಗಿತ್ತು. ಈ ಐತಿಹಾಸಿಕ ಸಮಾವೇಶದಲ್ಲಿ ಸುಮಾರು ಹದಿಮೂರು ಲಕ್ಷಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ರಾಜ್ಯದ ಮೂಲೆ ಮೂಲೆಯಿಂದ ಮಧ್ಯಪ್ರದೇಶದ ಬಿಜೆಪಿ ಘಟಕ ಕರೆತಂದಿತ್ತು. ರಾಷ್ಟ್ರದ ಇತಿಹಾಸದಲ್ಲಿಯೇ ರಾಜಕೀಯ ಸಮಾವೇಶ ಒಂದರಲ್ಲಿ ಇಷ್ಟೊಂದು ಜನರು ಸೇರಿರುವುದು ಇದೇ ಮೊದಲ ಬಾರಿ.

ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಇದೊಂದು ವಿಶ್ವ ದಾಖಲೆ ಎಂದು ಬಿಜೆಪಿ ಬಣ್ಣಿಸಿದೆ. ಲಕ್ಷಾಂತರ ಜನರು ಸೇರಿದ್ದರೂ ಕೂಡ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಬಿಜೆಪಿ ಹಮ್ಮಿಕೊಂಡಿತ್ತು. ಭೋಪಾಲ್ ನ ಜಂಬೂರಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಮತಗಟ್ಟೆಗಳ ಲಕ್ಷಾಂತರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. 12 ಸಾವಿರಕ್ಕೂ ಅಧಿಕ ಬಸ್ ಗಳು ಹಾಗೂ 8 ಸಾವಿರಕ್ಕೂ ಅಧಿಕ ಇತರ ವಾಹನಗಳಲ್ಲಿ ಕಾರ್ಯಕರ್ತರನ್ನು ಕರೆತರಲಾಗಿತ್ತು. ಐವತ್ತಕ್ಕೂ ಅಧಿಕ ದೊಡ್ಡದಾದಂತೆ ಎಲ್ಇಡಿ ಪರದೆಗಳನ್ನು ಮೈದಾನದ ಎಲ್ಲೆಡೆ ಅಳವಡಿಸಲಾಗಿತ್ತು.

ಜನಸಂಘದ ಸಹ ಸಂಸ್ಥಾಪಕರಾಗಿರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನದ ವಾರ್ಷಿಕೋತ್ಸವದ ಆಚರಣೆಯ ಭಾಗವಾಗಿ ಈ ಕಾರ್ಯಕರ್ತರ ಮಹಾ ಕುಂಭವನ್ನು ಬಿಜೆಪಿ ಹಮ್ಮಿಕೊಂಡಿತ್ತು. ಇನ್ನು ಇದೇ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೀನದ ದಯಾಳ್ ಉಪಾಧ್ಯಾಯರ ಸೇವೆಯನ್ನು ಸ್ಮರಿಸುತ್ತಾ ,ಭಾರತ ಮಾತೆ ಸೇವೆ ಮಾಡಲು ನಮಗೆ ಅವಕಾಶ ಸಿಕ್ಕಿದೆ, ದೇಶಧ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಶ್ರಮಿಸಿತ್ತಿದೆ. ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಹೆಮ್ಮೆಯ ವಿಚಾರ, ಅವರು ಕೆಸರನ್ನು ಏರಚಿದಷ್ಟು ನಮ್ಮ ಬಿಜೆಪಿಯ ಕಮಲ ಮತ್ತಷ್ಟು ಬಲಿಷ್ಠವಾಗಿ ಅರಳುತ್ತಿದೆ’ ಎಂದು ಹೇಳಿದರು.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago