Featured

ಹತ್ತು ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮಹಾಕುಂಭ ಮೇಳ : ಮಧ್ಯಪ್ರದೇಶದ ಭೋಪಾಲ್‍ನಲ್ಲಿ ವಿಶ್ವ ದಾಖಲೆ ಬರೆದ ಬಿಜೆಪಿ

ಭೋಪಾಲ್‍ :ಬಿಜೆಪಿ ಹಾಗೂ ಮೋದಿ ಅವರ ವರ್ಚಸ್ಸು ದಿನೇ ದಿನೇ ಹೆಚ್ಚಾಗುತ್ತಿದ್ದು, ರಾಷ್ಟ್ರದ ಹಳ್ಳಿ ಹಳ್ಳಿಗಳಿಗೂ ಕೇಸರಿ ಪಡೆ ಲಗ್ಗೆಯಿಡುತ್ತಿದೆ. ಜನರ ಮನಸ್ಸನ್ನು ಗೆಲ್ಲುವ ಮೂಲಕ ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುತ್ತಿದೆ. ಸದ್ಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಮತ್ತೊಂದು ಬಾರಿ ಕಳೆದ ಲೋಕಸಭೆ ಚುನಾವಣೆಯಂತೆಯೇ ಗೆಲುವನ್ನು ಪಡೆದು ಅಧಿಕಾರದ ಗದ್ದುಗೆಗೇರಲು ಮಾಸ್ಟರ್ ಪ್ಲಾನ್ ಗಳನ್ನು ರೂಪಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ಪ್ರಚಾರ ಕಾರ್ಯವನ್ನು ಶುರು ಮಾಡಿಕೊಂಡಿದೆ. ಇದರ ಭಾಗವಾಗಿ  ಮಧ್ಯಪ್ರದೇಶದ ಭೋಪಾಲ್ ನಲ್ಲಿ ಐತಿಹಾಸಿಕ ಸಮಾವೇಶವೊಂದನ್ನು ಬಿಜೆಪಿ ಆಯೋಜನೆ ಮಾಡಿತ್ತು. ಕಾರ್ಯಕರ್ತರ ಮಹಾಕುಂಭ ಎಂದು ಈ ಸಮಾವೇಶಕ್ಕೆ ಹೆಸರಿಡಲಾಗಿತ್ತು. ಈ ಐತಿಹಾಸಿಕ ಸಮಾವೇಶದಲ್ಲಿ ಸುಮಾರು ಹದಿಮೂರು ಲಕ್ಷಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ರಾಜ್ಯದ ಮೂಲೆ ಮೂಲೆಯಿಂದ ಮಧ್ಯಪ್ರದೇಶದ ಬಿಜೆಪಿ ಘಟಕ ಕರೆತಂದಿತ್ತು. ರಾಷ್ಟ್ರದ ಇತಿಹಾಸದಲ್ಲಿಯೇ ರಾಜಕೀಯ ಸಮಾವೇಶ ಒಂದರಲ್ಲಿ ಇಷ್ಟೊಂದು ಜನರು ಸೇರಿರುವುದು ಇದೇ ಮೊದಲ ಬಾರಿ.

ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಇದೊಂದು ವಿಶ್ವ ದಾಖಲೆ ಎಂದು ಬಿಜೆಪಿ ಬಣ್ಣಿಸಿದೆ. ಲಕ್ಷಾಂತರ ಜನರು ಸೇರಿದ್ದರೂ ಕೂಡ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಬಿಜೆಪಿ ಹಮ್ಮಿಕೊಂಡಿತ್ತು. ಭೋಪಾಲ್ ನ ಜಂಬೂರಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಮತಗಟ್ಟೆಗಳ ಲಕ್ಷಾಂತರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. 12 ಸಾವಿರಕ್ಕೂ ಅಧಿಕ ಬಸ್ ಗಳು ಹಾಗೂ 8 ಸಾವಿರಕ್ಕೂ ಅಧಿಕ ಇತರ ವಾಹನಗಳಲ್ಲಿ ಕಾರ್ಯಕರ್ತರನ್ನು ಕರೆತರಲಾಗಿತ್ತು. ಐವತ್ತಕ್ಕೂ ಅಧಿಕ ದೊಡ್ಡದಾದಂತೆ ಎಲ್ಇಡಿ ಪರದೆಗಳನ್ನು ಮೈದಾನದ ಎಲ್ಲೆಡೆ ಅಳವಡಿಸಲಾಗಿತ್ತು.

ಜನಸಂಘದ ಸಹ ಸಂಸ್ಥಾಪಕರಾಗಿರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನದ ವಾರ್ಷಿಕೋತ್ಸವದ ಆಚರಣೆಯ ಭಾಗವಾಗಿ ಈ ಕಾರ್ಯಕರ್ತರ ಮಹಾ ಕುಂಭವನ್ನು ಬಿಜೆಪಿ ಹಮ್ಮಿಕೊಂಡಿತ್ತು. ಇನ್ನು ಇದೇ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೀನದ ದಯಾಳ್ ಉಪಾಧ್ಯಾಯರ ಸೇವೆಯನ್ನು ಸ್ಮರಿಸುತ್ತಾ ,ಭಾರತ ಮಾತೆ ಸೇವೆ ಮಾಡಲು ನಮಗೆ ಅವಕಾಶ ಸಿಕ್ಕಿದೆ, ದೇಶಧ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಶ್ರಮಿಸಿತ್ತಿದೆ. ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಹೆಮ್ಮೆಯ ವಿಚಾರ, ಅವರು ಕೆಸರನ್ನು ಏರಚಿದಷ್ಟು ನಮ್ಮ ಬಿಜೆಪಿಯ ಕಮಲ ಮತ್ತಷ್ಟು ಬಲಿಷ್ಠವಾಗಿ ಅರಳುತ್ತಿದೆ’ ಎಂದು ಹೇಳಿದರು.

 

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

14 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

15 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago