Featured

ಹತ್ಯೆಯಾದ ದೀಪಕ್ ರಾವ್, ಫಾಜೀಲ್, ಜಲೀಲ್, ಮಸೂದ್ ಕುಟುಂಬಕ್ಕೆ ಪರಿಹಾರ : ಗೃಹ ಸಚಿವ ಭರವಸೆ – Vishwanews24

ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಕ್ರಮ : ಗೃಹ ಸಚಿವ ಡಾ. ಜಿ. ಪರಮೇಶ್ವರ್

ಮಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದಕ್ಷಿಣ ಕನ್ನಡದಲ್ಲಿ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣದ ಮರುತನಿಖೆಗೆ ಆದೇಶ ನೀಡಬೇಕು ಮತ್ತು ಎಲ್ಲಾ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹಲವು ಸಂಘಟನೆಗಳ ಮೂಲಕ ಒತ್ತಾಯಿಸಲಾಗಿತ್ತು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎರಡು ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಮಂಗಳೂರಿಗೆ ಆಗಮಿಸಿದ ಅವರು ದಕ್ಷಿಣ ಕನ್ನಡದಲ್ಲಿ ನಡೆದಿದ್ದ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಮತ್ತು ಪರಿಹಾರ ನೀಡಲು ಬೇಕಾದ ವರದಿ ನೀಡಲು ಸೂಚಿಸಿದ್ದೇನೆ ಎಂದರು.

ಆದಷ್ಟು ಶೀಘ್ರದಲ್ಲಿ ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ನೀಡಲಿದೆ. ಈ ವೇಳೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಡ್ರಗ್ಸ್ ಮಾಫಿಯಾ ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು. ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುಯವುದಾಗಿ ಭರವಸೆ ನೀಡಿದರು.

ಅಶಾಂತಿ ಸೃಷ್ಠಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ಇಲ್ಲಿನ ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿ ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ಸಹಕರಿಸಿ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago