Featured

ಹತ್ರಾಸ್‌ ದುರಂತ : ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ; ಪ್ರಕರಣ ಎಸ್‌ಐಟಿ ತನಿಖೆಗೆ : ಯೋಗಿ ಆದಿತ್ಯನಾಥ್‌ – vishwanews24

ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ; ಪ್ರಕರಣ ಎಸ್‌ಐಟಿ ತನಿಖೆಗೆ : ಯೋಗಿ ಆದಿತ್ಯನಾಥ್‌

ಲಕ್ನೋ: ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌  ಅವರು ಪರಿಹಾರದ ಮೊತ್ತದಲ್ಲಿ ಹೆಚ್ಚಳ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಘಟನೆಯ ತನಿಖೆಯನ್ನು ವಿಶೇಷ ತನಿಖಾ ತಂಡ ಗೆ ನೀಡುವುದಾಗಿ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ಭಕ್ತರ ರಕ್ಷಣೆ ಮತ್ತು ಸುರಕ್ಷತೆಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 121 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಯುಪಿ, ಹರಿಯಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಭಕ್ತರು ಈ ಕಾರ್ಯಕ್ರಮಕ್ಕೆ ಬಂದಿದ್ದರು. ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.

ಆಗ್ರಾ ಎಡಿಜಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದೇವೆ. ಈ ತಂಡ ಪ್ರಾಥಮಿಕ ವರದಿ ಸಲ್ಲಿಸಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಅಲ್ಲದೆ ರಾಜ್ಯ ಸರ್ಕಾರವು ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಿದೆ. ಇದರ ನೇತೃತ್ವವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ವಹಿಸಲಿದ್ದಾರೆ. ಆಡಳಿತ ಮತ್ತು ಪೊಲೀಸ್‌ನ ನಿವೃತ್ತ ಹಿರಿಯ ಅಧಿಕಾರಿಗಳು ಸಹ ಭಾಗವಾಗಲಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಈ ಘಟನೆಯಲ್ಲಿ ಸಂತ್ರಸ್ತರಾದ ಶಾಲಾ ವಿದ್ಯಾರ್ಥಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲಾಗುವುದು. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂಪಾಯಿ ನೀಡಲಾಗುವುದು ಎಂದು ಯೋಗಿ ಆದಿತ್ಯನಾಥ್‌ ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago