ದಕ್ಷಿಣ ಕನ್ನಡ

ಹದಿನೇಳು ಗಂಟೆಗಳಲ್ಲಿ ತುಳುಚಲನಚಿತ್ರ ನಿರ್ಮಾಣ : ಗಿನ್ನೆಸ್‌ ದಾಖಲೆಯ ಗರಿ

ಮಹಾನಗರ: ‘ಅಂಬರ್‌ ಕ್ಯಾಟರರ್’ ತುಳು ಚಲನಚಿತ್ರ ನಿರ್ಮಿಸಿರುವ ನಾಗೇಶ್ವರ ಸಿನಿ ಕಂಬೈನ್ಸ್‌ ಸಂಸ್ಥೆ ಇದೀಗ ಹದಿನೇಳು ತಾಸುಗಳಲ್ಲಿ ತುಳುಚಲನಚಿತ್ರ ನಿರ್ಮಿಸಿ ಗಿನ್ನೆಸ್‌ ದಾಖಲೆಗೆ ತುಳು ಚಲನಚಿತ್ರವನ್ನು ಕೊಂಡೊಯ್ಯಲು ಸಿದ್ಧತೆ ನಡೆಸಿದೆ.

ನಗರದಲ್ಲಿ ಶನಿವಾರ ಪ ಈ ಬಗ್ಗೆ ವಿವರಿಸಿದ ನಾಗೇಶ್ವರ ಸಿನಿ ಕಂಬೈನ್ಸ್‌ ನಿರ್ಮಾಪಕ ಕಡಂದಲೆ ಸುರೇಶ್‌ ಭಂಡಾರಿ ಅವರು ಗಿನ್ನೆಸ್‌ ದಾಖಲೆಗೆ ತುಳುಚಿತ್ರವನ್ನು ಕೊಂಡೋಯ್ಯುವ ದೃಷ್ಟಿಯಿಟ್ಟುಕೊಂಡು 17 ಗಂಟೆಯಲ್ಲಿ ತುಳುಚಿತ್ರ ನಿರ್ಮಾಣ ಮಾಡಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

ತುಳು ಚಿತ್ರರಂಗದಲ್ಲಿ 10 ಯಶಸ್ವಿ ಚಿತ್ರಗಳನ್ನು ನೀಡಿರುವ 10 ನಿರ್ದೇಶಕರು ಏಕಕಾಲದಲ್ಲಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. 10 ನಾಯಕ ನಟರು ಅಭಿನಯಿಸಲಿದ್ದು ಬಹುಶಃ ತುಳುಚಲನಚಿತ್ರ ರಂಗದಲ್ಲಿ ಪ್ರಥಮ ಮಲ್ಟಿಸ್ಟಾರ್‌ ಚಿತ್ರ ಇದಾಗಲಿದೆ ಎಂದರು. ಕಥೆ, ಚಿತ್ರಕಥೆ-ಸಂಭಾಷಣೆ-ಸಂಕಲನ ಹರೀಶ್‌ ಕೊಟ್ಪಾಡಿಯವರದ್ದಾಗಿದೆ. ಖ್ಯಾತ ನಿರ್ದೇಶಕರಾದ ದೇವದಾಸ್‌ ಕಾಪಿಕಾಡ್‌, ವಿಜಯ ಕುಮಾರ್‌ ಕೊಡಿಯಾಲಬೈಲ್‌, ಪ್ರಕಾಶ್‌ ಪಾಂಡೇಶ್ವರ, ಮಯೂರ್‌ ಶೆಟ್ಟಿ, ರಂಜಿತ್‌ ಸುವರ್ಣ, ರಾಜ್‌ಕಮಲ್‌, ರಿತೇಶ್‌ ಬಂಗೇರ, ರಘುಶೆಟ್ಟಿ ಮುಂತಾದವರು ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಅರ್ಜುನ್‌ ಕಾಪಿಕಾಡ್‌, ಸೌರಭ್‌ ಭಂಡಾರಿ, ರೂಪೇಶ್‌ ಶೆಟ್ಟಿ , ಪ್ರಥ್ವಿ ಅಂಬರ್‌, ಅಸ್ತಿಕ್‌ ಶೆಟ್ಟಿ ನಾಯಕ ನಟರಾಗಿ ಅಭಿನಯಿಸಲಿದ್ದಾರೆ. ಖ್ಯಾತ ಹಾಸ್ಯ ನಟರ ಸಮಾಗಮ ಇದರಲ್ಲಿದೆ. ತಮಿಳಿನ ಧನುಷ್‌ ಅವರ ‘ಪುಲಿಕುಟ್ಟಿ ‘ ಚಿತ್ರ ಖ್ಯಾತಿಯ, ಸುಮಾರು 40 ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಿರುವ ರಾಜಸಿಂಹ ಈ ಚಿತ್ರದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಲಿದ್ದಾರೆ ಎಂದರು.

ಪೃಥ್ವಿ ಅಂಬರ್‌ ಅವರು ಮಾತನಾಡಿ, ಚಿತ್ರ ಶೀರ್ಷಿಕೆಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು. ಈಗ ಶಿವರಾಜ್‌ ಕುಮಾರ್‌ ಅವರ ಅಭಿನಯದ, 18 ತಾಸುಗಳಲ್ಲಿ ನಿರ್ಮಾಣವಾಗಿರುವ ‘ಸುಗ್ರೀವ’ ಚಿತ್ರ ಅತಿ ಕಡಿಮೆ ಅವಧಿಯಲ್ಲಿ ನಿರ್ಮಾಣದ ದಾಖಲೆಯನ್ನು ಹೊಂದಿದೆ. ತುಳುವಿನಲ್ಲಿ 24 ತಾಸುಗಳಲ್ಲಿ ನಿರ್ಮಾಣಗೊಂಡಿರುವ ‘ಸೆಪ್ಟಂಬರ್‌ 8’ ಅತಿ ಕಡಿಮೆ ಅವಧಿಯಲ್ಲಿ ನಿರ್ಮಾಣವಾದ ಚಿತ್ರವಾಗಿದೆ ಎಂದು ವಿವರಿಸಿದರು.

ವಿಜಯ ಕುಮಾರ್‌ ಕೊಡಿಯಾಲಬೈಲ್‌, ಪ್ರಕಾಶ್‌ ಪಾಂಡೇಶ್ವರ, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ, ನಟ ಅರ್ಜುನ್‌ ಕಾಪಿಕಾಡ್‌ ಮಾತನಾಡಿ, ತುಳು ಚಿತ್ರರಂಗಕ್ಕೆ ಇನ್ನಷ್ಟು ಉತ್ತೇಜನ ದೊರೆಯುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ ಎಂದು ಹೇಳಿ ಶುಭಹಾರೈಸಿದರು.

ಮಯೂರ್‌ ಶೆಟ್ಟಿ, ರಂಜಿತ್‌ ಸುವರ್ಣ, ರಾಜ್‌ಕಮಲ್‌, ರಿತೇಶ್‌ ಬಂಗೇರ, ರಘುಶೆಟ್ಟಿ, ಪಮ್ಮಿ ಕೊಡಿಯಾಲಬೈಲ್‌, ತಮಿಳು ನಟ ರಾಜಸಿಂಹ, ನಟರಾದ ಸೌರಭ್‌ ಭಂಡಾರಿ, ಅಸ್ತಿಕ್‌ ಶೆಟ್ಟಿ , ಚೇತನ್‌ ರೈ, ಪೂಜಾ ಶೆಟ್ಟಿ , ಇಸ್ಮಾಯಿಲ್‌ ಮೂಡುಶೆಡ್ಡೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago